ಈ ವಿಚಾರವಾಗಿ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆ ಬಗ್ಗೆ ಆರೋಪ ಕೇಳಿ ಬಂದಿದೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ವಕೀಲರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು. ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ.