ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿ ಇಲ್ಲದ ಸಿಎಂ ಗಾದಿಗಾಗಿ ಕಾಂಗ್ರೆಸ್‌ ನಾಯಕರ ಕಾದಾಟ: ಬಿಜೆಪಿ ವ್ಯಂಗ್ಯ

ಅಕ್ಷರ ಗಾತ್ರ

ಬೆಂಗಳೂರು: ಖಾಲಿ‌ ಇಲ್ಲದ ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡೆಸುತ್ತಿರುವ ಕಾದಾಟವು ಕಾಂಗ್ರೆಸ್‌ ಪಕ್ಷದ ಅನೇಕರನ್ನು ಕಂಗಾಲಾಗಿಸುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿಯು, 'ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ದೆಹಲಿ ಭೇಟಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಾಹುಲ್ ಭೇಟಿಗೆ ಸಮಯ ಕೇಳಿದ್ದಾರೆ. ಖಾಲಿ‌ ಇಲ್ಲದ ಮುಖ್ಯಮಂತ್ರಿ ಗಾದಿಗಾಗಿ ಈ ಇಬ್ಬರು ನಾಯಕರು ನಡೆಸುತ್ತಿರುವ ಕಾದಾಟ ಕಾಂಗ್ರೆಸ್‌ ಪಕ್ಷದ ಅನೇಕ ಖಾಲಿ ತಲೆಗಳನ್ನು ಕಂಗಾಲಾಗಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದೆ.

'ವಲಸೆ ನಾಯಕ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್‌ ಪಕ್ಷದಲ್ಲಿ ಒಳಜಗಳ ಇಲ್ಲವೆಂದಾದರೆ ಡಿ.ಕೆ.ಶಿವಕುಮಾರ್‌ ಅವರು ರಾಹುಲ್ ಮುಂದೆ ಏಕೆ ಗೋಳು ತೋಡಿಕೊಳ್ಳುತ್ತಿದ್ದರು? ಉಸ್ತುವಾರಿ ಸುರ್ಜೇವಾಲಾರನ್ನು ಎರಡು ಬಾರಿ ಭೇಟಿ ಮಾಡಿ ನಿಮ್ಮ‌ ವಿರುದ್ಧ ದೂರು ನೀಡಿದ್ದೇಕೆ? ತಾನು ಕಳ್ಳ, ಪರರ ನಂಬ ಎಂಬಂತಾಗಿದೆ ಕಾಂಗ್ರೆಸ್ ಸ್ಥಿತಿ' ಎಂದು ಬಿಜೆಪಿ ಟೀಕಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT