ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಪಕ್ಷ, ಅವರಲ್ಲಿ ಪ್ರಾಮಾಣಿಕತೆ, ನೈತಿಕತೆ, ರಾಷ್ಟ್ರೀಯತೆ ಮತ್ತು ದೇಶ ಪ್ರೇಮ ಇಲ್ಲ. ಸಮನ್ಸ್ ವಿರುದ್ಧ ಬೀದಿಗಳಲ್ಲಿ ಪ್ರತಿಭಟನೆ ಮಾಡಿ ಏನು ಸಂದೇಶ ನೀಡುತ್ತಿದ್ದಾರೆ. ಭ್ರಷ್ಟಾಚಾರ ಮಾಡಿದರೂ ಪ್ರಶ್ನಿಸಬಾರದು, ಕಾನೂನಿಗಿಂತ ಅತೀತರು ಎಂಬ ಧೋರಣೆ ಸರಿಯೇ ಎಂದು ಅಶ್ವತ್ಥನಾರಾಯಣ ಕಿಡಿಕಾರಿದರು.