‘ಈಗಾಗಲೇ ಡಾ.ಎಂ.ಎಂ. ಕಲಬುರಗಿ, ಪನ್ಸಾರೆ, ಗೌರಿ ಸೇರಿದಂತೆ ಕೆಲವರ ಹತ್ಯೆ ಮಾಡಲಾಗಿದೆ. ಧ್ವನಿ ಅಡಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಆದರೆ, ಕಾಂಗ್ರೆಸ್ ಅದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ದೇಶದ ಏಕತೆ ಛಿದ್ರವಾಗಲು ಬಿಡುವುದಿಲ್ಲ. ದೇಶಕ್ಕಾಗಿ ಹೋರಾಟ ನಡೆಸಿದ ಪಕ್ಷ ನಮ್ಮದು. ಈಗ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕೆಲಸ ಮಾಡಲಾಗುವುದು’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.