ಕುಸಿದು ಬಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್
ರಾಜಭವನ ಮುತ್ತಿಗೆಗೆ ಹಾಕಲು ಹೊರಟ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಮಹಾರಾಣಿ ಕಾಲೇಜು ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಡೆದ ಪೋಲಿಸರು ತಡೆದರು. ಈ ವೇಳೆ, ಪೊಲೀಸರು ಮತ್ತು ಶಾಸಕಿಯರಾದ ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್ ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಅಂಜಲಿ ನಿಂಬಾಳ್ಕರ್ ಕುಸಿದು ಬಿದ್ದರು. ಈ ವೇಳೆ, ಪೊಲೀಸರು ಕುಡಿಯಲು ನೀರಿ ಕೊಟ್ಟು ಉಪಚರಿಸಿದರು.