ನಾನು ಮಾತಿಗೆ ಬದ್ಧ: ‘ಬಿಜೆಪಿಗೆ ವಲಸೆ ಹೋದವರಿಗೆ ಈಗ ಅತೃಪ್ತಿ ಕಾಡುತ್ತಿದೆ. ವಲಸೆ ಹೋದವರು ಮೊದಲು ಯಡಿಯೂರಪ್ಪ ಅವರನ್ನು ಮಾತು ತಪ್ಪದ ಮಗ ಎಂದು ಹಾಡಿ ಹೊಗಳುತ್ತಿದ್ದರು. ಈಗ ನಾಲಿಗೆ ಇಲ್ಲದ ನಾಯಕ ಎನ್ನುತ್ತಿದ್ದಾರೆ’ ಎಂದ ಅವರು, ‘ಪ್ರಳಯವಾದರೂ ಸರಿ, ವಲಸಿಗರನ್ನು ಕಾಂಗ್ರೆಸ್ಗೆ ಮತ್ತೆ ಸೇರಿಸುವುದಿಲ್ಲ ಎಂದು ನಾನು ಹಿಂದೆ ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ’ ಎಂದರು.