<p><strong>ಬೆಂಗಳೂರು</strong>: ಜನಸ್ಪಂದನಾ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸದಿರುವ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.</p>.<p>ಬಿಜೆಪಿಯ ಸಮಾವೇಶಕ್ಕೆ ಜೆಪಿ ನಡ್ಡಾ ಗೈರಾಗುವ ಮೂಲಕ ಯಾವ ಸಂದೇಶ ಕೊಟ್ಟಿದ್ದಾರೆ. ಬೊಮ್ಮಾಯಿಯವರ ಮೇಲೆ ಪ್ರೀತಿ ಇಲ್ಲವೆಂದೇ? ಬಿಜೆಪಿ ಆಡಳಿತ ಸಮಾಧಾನ ತರಲಿಲ್ಲವೆಂದೇ? ಜನ ನೋವಲ್ಲಿರುವಾಗ ಸಂಭ್ರಮ ನಡೆಸಿದರು ಎಂಬ ಕಳಂಕ ತಪ್ಪಿಸಿಕೊಳ್ಳಲೆಂದೇ? #BJPBrashtotsavaದ ಪ್ರಶ್ನೆಗಳನ್ನ ಎದುರಿಸಲಾಗದು ಎಂದೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಜನರಿಲ್ಲದೆ ಖಾಲಿ ಹೊಡೆಯುತ್ತಿರುವ ಊಟದ ಕೌಂಟರ್ಗಳು ಬಿಜೆಪಿಯ ವೈಫಲ್ಯದ ಕತೆ ಹೇಳುತ್ತಿವೆ! ಜನತೆಗೂ ತಿಳಿದಿದೆ. ಬಿಜೆಪಿಯವರು ಅನ್ನಭಾಗ್ಯದವರಲ್ಲ, ಕನ್ನ ಭಾಗ್ಯದವರೆಂದು! ಎಂದು ವ್ಯಂಗ್ಯ ಮಾಡಿದೆ.</p>.<p>ಗಂಗಾ ಕಲ್ಯಾಣ ಯೋಜನೆಯಲ್ಲಿ ಸ್ವಯಂ ಕಲ್ಯಾಣ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಶೋಷಿತರಿಗೆ ಅನ್ಯಾಯವೆಸಗಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.</p>.<p>ಬೋರ್ ವೆಲ್ ಹಗರಣ ನಡೆದಿರುವುದು ಇಲಾಖಾ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿದೆ. ಶೋಷಿತ ಸಮುದಾಯಗಳ ಪಾಲಿನ ಹಣ ಲೂಟಿ ಹೊಡೆದಿದ್ದೇ ಸರ್ಕಾರದ ಸಾಧನೆಯೇ ಬೊಮ್ಮಾಯಿ ಅವರೇ? ಆ ಕಾರಣಕ್ಕಾಗಿ ಸಂಭ್ರಮಾಚರಣೆಯೇ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕುಟುಕಿದೆ.</p>.<p>ಕೋವಿಡ್ ಹೆಸರಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆಯೇ? ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ ಜನರನ್ನು ಕೊಂದಿದ್ದು ಸಾಧನೆಯೇ? ಆಕ್ಸಿಜನ್ ಕೊರತೆ & ಕೋವಿಡ್ನಿಂದ ಮೃತರ ಸುಳ್ಳು ಸಂಖ್ಯೆ ಹೇಳಿದ್ದು ಸಾಧನೆಯೇ? ರಾಜ್ಯಾದ್ಯಂತ ಆರೋಗ್ಯ ಅವ್ಯವಸ್ಥೆ ನಿರ್ಮಿಸಿದ್ದು ಸಾಧನೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಪಿಎಸ್ಐ ಅಕ್ರಮದಲ್ಲಿ ಬಿಜೆಪಿ ಶಾಸಕರ, ಸಚಿವರ ನೇರ ಕೈವಾಡವಿದ್ದರೂ ವಿಚಾರಣೆಯಿಂದ ಅವರಿಗೆ ವಿನಾಯಿತಿ ನೀಡಿದ್ದೀರಿ. ಪಿಎಸ್ಐ ಅಭ್ಯರ್ಥಿಯಿಂದ ಬಿಜೆಪಿ ಶಾಸಕ ಹಣ ಪಡೆದಿರುವುದು ಬೆಳಕಿಗೆ ಬಂದರೂ, ಶಾಸಕರೇ ಒಪ್ಪಿಕೊಂಡರೂ ತನಿಖೆ ನಡೆಸದೆ ಭ್ರಷ್ಟಾಚಾರಕ್ಕೆ ಬೆಂಬಲ ಕೊಟ್ಟಿರುವುದೇ ನಿಮ್ಮ ಸಾಧನೆಯೇ ?#BJPBrashtotsava ದಲ್ಲಿ ಅಕ್ರಮವೆಲ್ಲ ಸಕ್ರಮವೇ? ಜನರಿಗೆ ಸರ್ಕಾರದ ಸ್ಪಂದನೆ ಇಲ್ಲದಿರುವಾಗ, ಸಮಾವೇಶಕ್ಕೂ ಜನರ ಸ್ಪಂದನೆ ಇಲ್ಲದಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಅಭಿವೃದ್ಧಿಯಾಗುತ್ತಿದೆ ಎಂದು ಆರೋಪಿಸಿದ್ದು ಬೇರೆ ಯಾರೂ ಅಲ್ಲ, ಸ್ವತಃ ಬಿಜೆಪಿ ಶಾಸಕರೇ. ವೇದಿಕೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಗಂಟಲಿನ ಸೈಜ್ಗಿಂತ ಹೆಚ್ಚಾಗಿ ಕಿರುಚಿಕೊಳ್ಳುತ್ತಿದ್ದ ಬೊಮ್ಮಾಯಿಯವರೇ, ಜನಪರ ಆಡಳಿತ ನಡೆಸಿ ಎಂದರೆ #BJPBrashtotsava ನಡೆಸಿಕೊಂಡು ಬಂದಿರುವುದು ನೀಜವಲ್ಲವೇ? ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಸ್ಪಂದನಾ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸದಿರುವ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.</p>.<p>ಬಿಜೆಪಿಯ ಸಮಾವೇಶಕ್ಕೆ ಜೆಪಿ ನಡ್ಡಾ ಗೈರಾಗುವ ಮೂಲಕ ಯಾವ ಸಂದೇಶ ಕೊಟ್ಟಿದ್ದಾರೆ. ಬೊಮ್ಮಾಯಿಯವರ ಮೇಲೆ ಪ್ರೀತಿ ಇಲ್ಲವೆಂದೇ? ಬಿಜೆಪಿ ಆಡಳಿತ ಸಮಾಧಾನ ತರಲಿಲ್ಲವೆಂದೇ? ಜನ ನೋವಲ್ಲಿರುವಾಗ ಸಂಭ್ರಮ ನಡೆಸಿದರು ಎಂಬ ಕಳಂಕ ತಪ್ಪಿಸಿಕೊಳ್ಳಲೆಂದೇ? #BJPBrashtotsavaದ ಪ್ರಶ್ನೆಗಳನ್ನ ಎದುರಿಸಲಾಗದು ಎಂದೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಜನರಿಲ್ಲದೆ ಖಾಲಿ ಹೊಡೆಯುತ್ತಿರುವ ಊಟದ ಕೌಂಟರ್ಗಳು ಬಿಜೆಪಿಯ ವೈಫಲ್ಯದ ಕತೆ ಹೇಳುತ್ತಿವೆ! ಜನತೆಗೂ ತಿಳಿದಿದೆ. ಬಿಜೆಪಿಯವರು ಅನ್ನಭಾಗ್ಯದವರಲ್ಲ, ಕನ್ನ ಭಾಗ್ಯದವರೆಂದು! ಎಂದು ವ್ಯಂಗ್ಯ ಮಾಡಿದೆ.</p>.<p>ಗಂಗಾ ಕಲ್ಯಾಣ ಯೋಜನೆಯಲ್ಲಿ ಸ್ವಯಂ ಕಲ್ಯಾಣ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಶೋಷಿತರಿಗೆ ಅನ್ಯಾಯವೆಸಗಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.</p>.<p>ಬೋರ್ ವೆಲ್ ಹಗರಣ ನಡೆದಿರುವುದು ಇಲಾಖಾ ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗಿದೆ. ಶೋಷಿತ ಸಮುದಾಯಗಳ ಪಾಲಿನ ಹಣ ಲೂಟಿ ಹೊಡೆದಿದ್ದೇ ಸರ್ಕಾರದ ಸಾಧನೆಯೇ ಬೊಮ್ಮಾಯಿ ಅವರೇ? ಆ ಕಾರಣಕ್ಕಾಗಿ ಸಂಭ್ರಮಾಚರಣೆಯೇ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕುಟುಕಿದೆ.</p>.<p>ಕೋವಿಡ್ ಹೆಸರಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆಯೇ? ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ ಜನರನ್ನು ಕೊಂದಿದ್ದು ಸಾಧನೆಯೇ? ಆಕ್ಸಿಜನ್ ಕೊರತೆ & ಕೋವಿಡ್ನಿಂದ ಮೃತರ ಸುಳ್ಳು ಸಂಖ್ಯೆ ಹೇಳಿದ್ದು ಸಾಧನೆಯೇ? ರಾಜ್ಯಾದ್ಯಂತ ಆರೋಗ್ಯ ಅವ್ಯವಸ್ಥೆ ನಿರ್ಮಿಸಿದ್ದು ಸಾಧನೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಪಿಎಸ್ಐ ಅಕ್ರಮದಲ್ಲಿ ಬಿಜೆಪಿ ಶಾಸಕರ, ಸಚಿವರ ನೇರ ಕೈವಾಡವಿದ್ದರೂ ವಿಚಾರಣೆಯಿಂದ ಅವರಿಗೆ ವಿನಾಯಿತಿ ನೀಡಿದ್ದೀರಿ. ಪಿಎಸ್ಐ ಅಭ್ಯರ್ಥಿಯಿಂದ ಬಿಜೆಪಿ ಶಾಸಕ ಹಣ ಪಡೆದಿರುವುದು ಬೆಳಕಿಗೆ ಬಂದರೂ, ಶಾಸಕರೇ ಒಪ್ಪಿಕೊಂಡರೂ ತನಿಖೆ ನಡೆಸದೆ ಭ್ರಷ್ಟಾಚಾರಕ್ಕೆ ಬೆಂಬಲ ಕೊಟ್ಟಿರುವುದೇ ನಿಮ್ಮ ಸಾಧನೆಯೇ ?#BJPBrashtotsava ದಲ್ಲಿ ಅಕ್ರಮವೆಲ್ಲ ಸಕ್ರಮವೇ? ಜನರಿಗೆ ಸರ್ಕಾರದ ಸ್ಪಂದನೆ ಇಲ್ಲದಿರುವಾಗ, ಸಮಾವೇಶಕ್ಕೂ ಜನರ ಸ್ಪಂದನೆ ಇಲ್ಲದಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಅಭಿವೃದ್ಧಿಯಾಗುತ್ತಿದೆ ಎಂದು ಆರೋಪಿಸಿದ್ದು ಬೇರೆ ಯಾರೂ ಅಲ್ಲ, ಸ್ವತಃ ಬಿಜೆಪಿ ಶಾಸಕರೇ. ವೇದಿಕೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಗಂಟಲಿನ ಸೈಜ್ಗಿಂತ ಹೆಚ್ಚಾಗಿ ಕಿರುಚಿಕೊಳ್ಳುತ್ತಿದ್ದ ಬೊಮ್ಮಾಯಿಯವರೇ, ಜನಪರ ಆಡಳಿತ ನಡೆಸಿ ಎಂದರೆ #BJPBrashtotsava ನಡೆಸಿಕೊಂಡು ಬಂದಿರುವುದು ನೀಜವಲ್ಲವೇ? ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>