ಸಚಿವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ತೀರ್ಮಾನಿಸಿದೆ. ಅವರು ನಗರ ಪಾಲಿಕೆ ಸದಸ್ಯರಾಗಿ, ಶಾಸಕರಾಗಿ, ಮಂತ್ರಿಯಾಗಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪ ಇದೆ. ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗುತ್ತಿದೆ. ಸೋಮಣ್ಣ ಅವರೇ ರಾಜೀನಾಮೆ ನೀಡಬೇಕು, ಇಲ್ಲವಾದರೆ ಮುಖ್ಯಮಂತ್ರಿಯವರು ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.