ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಿ ಮಾತನಾಡಿದ ಅವರು, ‘ಅಂಬೇಡ್ಕರ್ ನಿಧನದ ನಂತರ ದೆಹಲಿಯಲ್ಲಿ ಅವರ ಅಂತ್ಯಸಂಸ್ಕಾರಕ್ಕೂ ಕಾಂಗ್ರೆಸ್ ಅಡ್ಡಿಪಡಿಸಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರ ಹುಟ್ಟೂರು ಮಹುವಾ ಪ್ರದೇಶವನ್ನು ಅಭಿವೃದ್ಧಿಪಡಿಸಿ, ಸ್ಮಾರಕ ನಿರ್ಮಿಸುತ್ತಿದೆ’ ಎಂದರು.