ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಿ ತಪ್ಪು ಮಾಡಿದ್ದೇನೆ: ಕಣ್ಣೀರಿಟ್ಟ ಸಲೀಂ

Last Updated 14 ಅಕ್ಟೋಬರ್ 2021, 13:32 IST
ಅಕ್ಷರ ಗಾತ್ರ

ಬೆಂಗಳೂರು: 'ನನ್ನಿಂದ ದೊಡ್ಡ ತಪ್ಪಾಗಿದೆ. ಡಿ.ಕೆ.ಶಿವಕುಮಾರ್ ಅವರ ಬಗ್ಗೆಮಾತನಾಡಬಾರದಾಗಿತ್ತು. ಮಾತನಾಡಿ ತಪ್ಪು ಮಾಡಿದ್ದೇನೆ' ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಕಣ್ಣೀರು ಹಾಕಿದ್ದಾರೆ.

ನೀರಾವರಿ ಇಲಾಖೆಯಲ್ಲಿ ಪರ್ಸೆಂಟೇಜ್ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಬಗ್ಗೆ ಪಕ್ಷದ ಇನ್ನೊಬ್ಬ ಮುಖಂಡ ವಿ.ಎಸ್. ಉಗ್ರಪ್ಪ ಜೊತೆ ಖಾಸಗಿಯಾಗಿ ಸಲೀಂ ಮಾತನಾಡಿರುವುದು ಬುಧವಾರ ವೈರಲ್ ಆಗಿತ್ತು. ಆ ಬಳಿಕ ಸಲೀಂ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಸಲೀಂ, 'ಡಿ.ಕೆ. ಶಿವಕುಮಾರ್ ಅವರು ಏನೇ ಶಿಕ್ಷೆ ಕೊಡಲಿ. ಅವರು ನನ್ನನ್ನು ಬೇಕಾದರೆ ಸಾಯಿಸಲಿ.‌ ಅದಕ್ಕೂ ಸಿದ್ಧನಿದ್ದೇನೆ' ಎಂದು ಭಾವುಕರಾಗಿ ಹೇಳಿದರು.

'ಡಿ.ಕೆ.ಶಿವಕುಮಾರ್ ಅವರನ್ನು ನಾನು ಭೇಟಿ ಮಾಡಿಲ್ಲ. ಯಾವ ಮುಖ ಇಟ್ಟುಕೊಂಡು ಅವರನ್ನು ಭೇಟಿ ಮಾಡಲಿ.ಅವರು ನನ್ನ ಜೊತೆ ಮಾತನಾಡಿಲ್ಲ.ನನ್ನಿಂದ ಪಕ್ಷಕ್ಕೆ, ಡಿ.ಕೆ.ಶಿವಕುಮಾರ್ ಅವರ ಇಮೇಜ್‌ಗೆ ಧಕ್ಕೆಯಾಗಿದೆ.‌ ಇಷ್ಟು ವರ್ಷಗಳ ನನ್ನ ಸಾಧನೆ ಮಣ್ಣು ಪಾಲಾಯಿತು. ಕಾಂಗ್ರೆಸ್ ಪಕ್ಷ ನನ್ನನ್ನು ಆರು ವರ್ಷಗಳ ಅವಧಿಗೆ ಉಚ್ಛಾಟಿಸಿದೆ. ಆದರೂ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿಕೊಂಡು ಹೋಗುತ್ತೇನೆ' ಎಂದರು.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT