ಚಳ್ಳಕೆರೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ನಾಯಕರಿಗೆ ಅಡ್ಡಿಪಡಿಸುವುದನ್ನು ಮುಂದುವರಿಸಿದರೆ ಬಿಜೆಪಿ ಕೂಡ ಇದೇ ಸಮಸ್ಯೆ ಎದುರಿಸಬೇಕಾಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಇಳಿಯಬೇಕಾಗುತ್ತದೆ. ಆಗ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಏನಾಗುತ್ತದೆ ಎಂಬ ಅರಿವು ಇದೆಯೇ’ ಎಂದು ಆಕ್ರೋಶಭರಿತವಾಗಿ ಪ್ರಶ್ನಿಸಿದರು.