ರಾಜ್ಯಸಭಾ ಸದಸ್ಯ ಡಾ.ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಶಾಸಕರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮ್ಮದ್ ಖಾನ್, ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಮತ್ತು ಎಐಸಿಸಿ ವಕ್ತಾರ ಬೃಜೇಶ್ ಕಾಳಪ್ಪ ಅವರಿದ್ದ ನಿಯೋಗ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ಶುಕ್ರವಾರ ಭೇಟಿಮಾಡಿ ದೂರು ಸಲ್ಲಿಸಿತು.