‘ಗಾಂಧೀಜಿ ಹೆಸರು ಹೇಳಿಕೊಂಡು ಅಧಿಕಾರಕ್ಕೇರಿದ ಕಾಂಗ್ರೆಸ್ ಪಕ್ಷವು ಅವರ ವಿಚಾರಧಾರೆ, ಗ್ರಾಮ ಸ್ವರಾಜ್ಯವನ್ನು ಮರೆಯಿತು. ಮತ ಬೇಟೆಗಾಗಿ ಅಂಬೇಡ್ಕರ್ ಫೋಟೊ ಬಳಸುವ ಈ ಪಕ್ಷವು ಅವರು ಜೀವಂತವಾಗಿದ್ದಾಗ ಸರಿಯಾಗಿ ಗೌರವವನ್ನೇ ಕೊಡಲಿಲ್ಲ. ಹತ್ತಾರು ಚುನಾವಣೆಗಳಲ್ಲಿ ಗೋಮಾತೆಯ ಚಿಹ್ನೆ (ಹಸು ಹಾಗೂ ಕರು) ಅಡಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು. ಆದರೆ, ಅದನ್ನು ಮರೆತು ಹಸು ಹಂತಕರಿಗೆ ಮಣೆ ನೀಡಿತು. ಗೋಮಾಂಸ ತಿನ್ನುವ ಹೇಳಿಕೆ ನೀಡಿ ದೇಶದ ಸಂಸ್ಕೃತಿಗೆ ಅವಮಾನ ಮಾಡುತ್ತಿದೆ’ ಎಂದರು.