<p><strong>ಬೆಂಗಳೂರು:</strong> ಭ್ರಷ್ಟಾಚಾರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಬಿಜೆಪಿ ಭ್ರಷ್ಟಾಚಾರಕ್ಕೆ ಒಪ್ಪಿಗೆ ಮುದ್ರೆ ಒತ್ತಿದಂತೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ರಾಜ್ಯದ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಹಿಂದಿನ ಅಬಕಾರಿ ಸಚಿವರು ಅಧಿಕಾರಿಗಳಿಗೆ ಹಣಕ್ಕೆ ಪೀಡಿಸುವುದನ್ನ ಇಂದಿನ ಸಚಿವರೂ ಮುಂದುವರೆಸಿ ಬಿಜೆಪಿಯ ಭ್ರಷ್ಟಾಚಾರದ ಪರಂಪರೆಗೆ ತಮ್ಮ ಕೊಡುಗೆನ್ನೂ ನೀಡಿದ್ದಾರೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/hd-kumaraswamy-has-demanded-an-investigation-into-corruption-in-the-excise-department-841234.html" target="_blank">ನೀರಾವರಿ ಕಿಕ್ಬ್ಯಾಕ್ ಜೊತೆಗೇ, ಅಬಕಾರಿ ಲಂಚ ಹಗರಣವೂ ತನಿಖೆಯಾಗಲಿ: ಎಚ್ಡಿಕೆ</a></strong></p>.<p>‘ಅಬಕಾರಿ ಇಲಾಖೆಯ ಲಂಚವತಾರದ ಬಗ್ಗೆ ಹಿಂದೆಯೇ ಪತ್ರ ತಲುಪಿದ್ದರೂ ಸುಭಗನಂತೆ ಮಾತನಾಡುವ ಪ್ರಧಾನಿಯ ಮೌನ ಬಿಜೆಪಿ ಭ್ರಷ್ಟಾಚಾರಕ್ಕೆ ‘ಮೋದಿ ಒಪ್ಪಿಗೆ ಮುದ್ರೆ’ ಒತ್ತಿದಂತೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>‘ಸಚಿವರ ಭ್ರಷ್ಟಾಚಾರಕ್ಕೆ ಅಧಿಕಾರಿಗಳ ತಲೆದಂಡವೇಕೆ? ಆರೋಪವಿರುವುದು ಸಚಿವರ ವಿರುದ್ಧ, ಸಚಿವರನ್ನು ತನಿಖೆಗೆ ಒಳಪಡಿಸುವುದನ್ನ ಬಿಟ್ಟು ಅಧಿಕಾರಿಗಳನ್ನು ಅಮಾನತುಗೊಳಿಸಿ ಪ್ರಕರಣ ಮುಚ್ಚಿಹಾಕಿ ಸಚಿವರನ್ನು ಬಚಾವು ಮಾಡುವ ಈ ತಂತ್ರ ಸಾಕು. ಯಡಿಯೂರಪ್ಪ ಅವರೇ, ಕೂಡಲೇ ಈ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಿ, ಸತ್ಯಾಸತ್ಯತೆ ಹೊರಬರಲಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p>.<p>ಅಬಕಾರಿ ಖಾತೆ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಜಿಲ್ಲೆಯ ಅಬಕಾರಿ ಇಲಾಖೆ ಕಾರ್ಯವನ್ನು ಶ್ಲಾಘಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಇಲಾಖೆಯ ಆಂತರಿಕ ಸಭೆಯಲ್ಲಿ ಸಚಿವರಿಗೆ ₹5 ಲಕ್ಷ ನೀಡುವಂತೆ ಸೂಚಿಸಲಾಗಿದೆ. ನಮ್ಮ ಮೇಲೆ ಒತ್ತಡ ಇರುವುದರಿಂದ ಹಣ ತಲುಪಿಸಬೇಕು' ಎಂದು ಮಹಿಳಾ ಅಧಿಕಾರಿಯೊಬ್ಬರು ಕಿರಿಯ ಅಧಿಕಾರಿಗಳಿಗೆ ಹೇಳುವ ಆಡಿಯೊ ವೈರಲ್ ಆಗಿದೆ.</p>.<p><strong>ಇದನ್ನೂ ಓದಿ...<a href="https://www.prajavani.net/district/koppal/5-lakhs-bribe-to-excise-minister-audio-viral-841006.html" target="_blank"> ‘ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ' ಅಧಿಕಾರಿ ಹೇಳಿಕೆ ಆಡಿಯೊ ವೈರಲ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭ್ರಷ್ಟಾಚಾರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಬಿಜೆಪಿ ಭ್ರಷ್ಟಾಚಾರಕ್ಕೆ ಒಪ್ಪಿಗೆ ಮುದ್ರೆ ಒತ್ತಿದಂತೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ರಾಜ್ಯದ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಹಿಂದಿನ ಅಬಕಾರಿ ಸಚಿವರು ಅಧಿಕಾರಿಗಳಿಗೆ ಹಣಕ್ಕೆ ಪೀಡಿಸುವುದನ್ನ ಇಂದಿನ ಸಚಿವರೂ ಮುಂದುವರೆಸಿ ಬಿಜೆಪಿಯ ಭ್ರಷ್ಟಾಚಾರದ ಪರಂಪರೆಗೆ ತಮ್ಮ ಕೊಡುಗೆನ್ನೂ ನೀಡಿದ್ದಾರೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/hd-kumaraswamy-has-demanded-an-investigation-into-corruption-in-the-excise-department-841234.html" target="_blank">ನೀರಾವರಿ ಕಿಕ್ಬ್ಯಾಕ್ ಜೊತೆಗೇ, ಅಬಕಾರಿ ಲಂಚ ಹಗರಣವೂ ತನಿಖೆಯಾಗಲಿ: ಎಚ್ಡಿಕೆ</a></strong></p>.<p>‘ಅಬಕಾರಿ ಇಲಾಖೆಯ ಲಂಚವತಾರದ ಬಗ್ಗೆ ಹಿಂದೆಯೇ ಪತ್ರ ತಲುಪಿದ್ದರೂ ಸುಭಗನಂತೆ ಮಾತನಾಡುವ ಪ್ರಧಾನಿಯ ಮೌನ ಬಿಜೆಪಿ ಭ್ರಷ್ಟಾಚಾರಕ್ಕೆ ‘ಮೋದಿ ಒಪ್ಪಿಗೆ ಮುದ್ರೆ’ ಒತ್ತಿದಂತೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>‘ಸಚಿವರ ಭ್ರಷ್ಟಾಚಾರಕ್ಕೆ ಅಧಿಕಾರಿಗಳ ತಲೆದಂಡವೇಕೆ? ಆರೋಪವಿರುವುದು ಸಚಿವರ ವಿರುದ್ಧ, ಸಚಿವರನ್ನು ತನಿಖೆಗೆ ಒಳಪಡಿಸುವುದನ್ನ ಬಿಟ್ಟು ಅಧಿಕಾರಿಗಳನ್ನು ಅಮಾನತುಗೊಳಿಸಿ ಪ್ರಕರಣ ಮುಚ್ಚಿಹಾಕಿ ಸಚಿವರನ್ನು ಬಚಾವು ಮಾಡುವ ಈ ತಂತ್ರ ಸಾಕು. ಯಡಿಯೂರಪ್ಪ ಅವರೇ, ಕೂಡಲೇ ಈ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಿ, ಸತ್ಯಾಸತ್ಯತೆ ಹೊರಬರಲಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p>.<p>ಅಬಕಾರಿ ಖಾತೆ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಜಿಲ್ಲೆಯ ಅಬಕಾರಿ ಇಲಾಖೆ ಕಾರ್ಯವನ್ನು ಶ್ಲಾಘಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಇಲಾಖೆಯ ಆಂತರಿಕ ಸಭೆಯಲ್ಲಿ ಸಚಿವರಿಗೆ ₹5 ಲಕ್ಷ ನೀಡುವಂತೆ ಸೂಚಿಸಲಾಗಿದೆ. ನಮ್ಮ ಮೇಲೆ ಒತ್ತಡ ಇರುವುದರಿಂದ ಹಣ ತಲುಪಿಸಬೇಕು' ಎಂದು ಮಹಿಳಾ ಅಧಿಕಾರಿಯೊಬ್ಬರು ಕಿರಿಯ ಅಧಿಕಾರಿಗಳಿಗೆ ಹೇಳುವ ಆಡಿಯೊ ವೈರಲ್ ಆಗಿದೆ.</p>.<p><strong>ಇದನ್ನೂ ಓದಿ...<a href="https://www.prajavani.net/district/koppal/5-lakhs-bribe-to-excise-minister-audio-viral-841006.html" target="_blank"> ‘ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ' ಅಧಿಕಾರಿ ಹೇಳಿಕೆ ಆಡಿಯೊ ವೈರಲ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>