ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿಯ ಅರಿವಿಲ್ಲದೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಮೊದಲಿನಿಂದಲೂ ಇದೇ ಪ್ರವೃತ್ತಿ ಅವರಲ್ಲಿ ಬೆಳೆದು ಬಂದಿದೆ. ಅದರ ಪರಿಣಾಮ ಎರಡು ಅವಧಿಯಲ್ಲಿಯೂ ಸಮರ್ಥವಾಗಿ ವಿರೋಧ ಪಕ್ಷದಲ್ಲಿ ಇರಲು ಅವರಿಗೆ ಸಾಧ್ಯವಾಗಿಲ್ಲ. ರಾಹುಲ್ ಗಾಂಧಿ ಸಹ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ಬಾಯಿಗೆ ಬಂದಂತೆ ಮಾತನಾಡುತ್ತಿರುವುದೇ ಅವರ ಹಿನ್ನೆಡೆಗೆ ಕಾರಣ' ಎಂದು ವಿಶ್ಲೇಷಿಸಿದರು.