ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಪಕ್ಷದ ವರಿಷ್ಠರು ಕರೆ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿಯವರನ್ನು ಇ.ಡಿ ಅಧಿಕಾರಿಗಳು ನಾಲ್ಕು ಬಾರಿ ವಿಚಾರಣೆಗೆ ಒಳಪಡಿಸಿದ್ದಾರೆ.
ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಬಾರದು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರಿಸಿದ್ದರು.
ಪಕ್ಷದ ಶಾಸಕರು, ಸಂಸದರು ಮತ್ತು ಮಾಜಿ ಶಾಸಕ, ಸಂಸದರು ಪ್ರತಿಭಟನೆಯಲ್ಲಿ ಕೈಜೋಡಿಸಿ ಎಂದು ಕಾಂಗ್ರೆಸ್ ಕೇಳಿಕೊಂಡಿದೆ.