ಮಂಡ್ಯ ಜಿಲ್ಲೆಯ ಜನರ ಜೀವನಾಧಾರವಾಗಿರುವ ಮೈಷುಗರ್ ಪುನಾರಂಭ ಹಾಗೂ ಪುನಶ್ಚೇತನಕ್ಕಾಗಿ ಈ ಸಾಲಿನ ಬಜೆಟ್ನಲ್ಲಿ ₹ 50 ಕೋಟಿ ಮೀಸಲಿಡಲಾಗಿದೆ. ಮೊದಲ ಹಂತದಲ್ಲಿ ₹ 15 ಕೋಟಿ ಬಿಡುಗಡೆಗೊಳಿಸಲಾಗುವುದು ಎಂಬ ಆಶ್ವಾಸನೆಯನ್ನು ಸರ್ಕಾರ ನೀಡಿತ್ತು. ಕಾರ್ಖಾನೆಯಲ್ಲಿ ಸಾಕಷ್ಟು ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಂದರೆಗಳು ಇವೆ. ಕಾರ್ಖಾನೆ ಆರಂಭವಾಗದೆ ಸುಮಾರು 2 ವರ್ಷಗಳು ಕಳೆದಿವೆ. ಯಂತ್ರಗಳ ದುರಸ್ತಿಯಾಗಬೇಕಿದ್ದು ಹೊಸ ಯಂತ್ರೋಪಕರಣಗಳು ಅಥವಾ ಬಿಡಿಭಾಗಗಳು ಬೇಕಿರುತ್ತವೆ. ಮೂಲಭೂತ ಸೌಲಭ್ಯ ಒದಗಿಸಬೇಕಿದೆ. ಈ ಎಲ್ಲಾ ಪ್ರಕ್ರಿಯೆಗೆ ಈಗ ಬಿಡುಗಡೆ ಮಾಡಿರುವ ₹3.75 ಕೋಟಿ ರೂಪಾಯಿ ಯಾವುದಕ್ಕೂ ಸಾಲದಾಗಿದೆ. ಬ್ಯಾಂಕ್ ಮೂಲಕ ದುಡಿಮೆ ಬಂಡವಾಳಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ನೀಡಿದ್ದ ಭರವಸೆಯೂ ಈಡೇರಿಲ್ಲ ಎಂದರು.