ರಾಮನಗರದಲ್ಲಿ ಸೋಮವಾರ ನಡೆದ ಘಟನೆಯ ಕುರಿತಂತೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಮತ್ತು ಆ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಮುಂದೆಯೇ ಸಚಿವ ಅಶ್ವತ್ಥನಾರಾಯಣ ಈ ರೀತಿ ಮಾತನಾಡಿದ್ದು ಸರಿಯೇ’ ಎಂದೂ ಪ್ರಶ್ನಿಸಿದರು. ‘ಭಾಷಣದಲ್ಲಿ ಸಚಿವರು ಬಳಸುತ್ತಿರುವ ಭಾಷೆ, ಶೈಲಿ ಸರಿಯಿಲ್ಲ. ಸಾಕು ನಿಲ್ಲಿಸಿ ಎಂದು ಸ್ವತಃ ಮುಖ್ಯಮಂತ್ರಿ ಸೂಚಿಸಿದರೂ ಅವರು ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಉನ್ನತ ಶಿಕ್ಷಣ ಸಚಿವರಾಗಿ ಅವರು, ತಮ್ಮ ಮಾತು, ವರ್ತನೆಯಿಂದ ಯುವ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ’ ಎಂದರು.