‘ಈ ಹಿಂದೆ ಪ್ರಧಾನಿ ಬಂದಿದ್ದಾಗ ಮೈಸೂರನ್ನು ಪ್ಯಾರೀಸ್ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಹೊಸ ಯೋಜನೆಯನ್ನು ಅವರು ನೀಡಿಲ್ಲ. ಸದ್ಯ, ಅಖಿಲ ಭಾರತ ವಾಕ್– ಶ್ರವಣ ಸಂಸ್ಥೆಯ (ಆಯುಷ್)ವಿಸ್ತರಣೆಯ ಯೋಜನೆ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿತವಾಗಿತ್ತು. ಆಗ ₹ 134 ಕೋಟಿ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು. ಆ ಯೋಜನೆಯನ್ನು ಈಗ ಉದ್ಘಾಟಿಸುತ್ತಿದ್ದಾರೆ’ ಎಂದು ಹೇಳಿದರು.