ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕಾರ್ಯಕ್ರಮ: ಪ್ರತ್ಯೇಕ ವಿಮಾನದಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

Last Updated 27 ಜೂನ್ 2022, 5:56 IST
ಅಕ್ಷರ ಗಾತ್ರ

ಕೊಪ್ಪಳ: ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತ್ಯೇಕ ವಿಮಾನದಲ್ಲಿ ಬಂದರು.

ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ್ ಅವರ ಪುತ್ರಿಯ ವಿವಾಹ ಕಾರ್ಯಕ್ರಮ ಸೋಮವಾರ ಸಿಂಧನೂರಿನಲ್ಲಿ‌ ಆಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸಮೀಪದ ಬಸಾಪುರ ಖಾಸಗಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ಬೇರೆ ಬೇರೆಯಾಗಿ ಬಂದರು.

ಮೊದಲು ಸಿದ್ದರಾಮಯ್ಯ ಬಂದು ರಸ್ತೆ ಮಾರ್ಗದ ಮೂಲಕ ಸಿಂಧನೂರಿಗೆ ತೆರಳಿದರು. ಅರ್ಧ ಗಂಟೆ ಬಳಿಕ ಶಿವಕುಮಾರ್ ಬಂದರು. ನಾಯಕರು ಪ್ರತ್ಯೇಕವಾಗಿ ಬಂದಿದ್ದು ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ಹುಟ್ಟು ಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT