<p><strong>ತುಮಕೂರು:</strong> ‘ಡಾ. ಸಿ.ಎಂ. ರಾಜೇಶ್ ಗೌಡ ಬಿಜೆಪಿ ಸೇರಲು ನಾನು ಕಾರಣ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ, ‘ಅವನಂತಹ ಪೆದ್ದ ಯಾರೂ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜೇಶ್, ನನ್ನ ಮಗನ ಸ್ನೇಹಿತ. ನನ್ನ ಸ್ನೇಹಿತ ಅಲ್ಲ. ನನ್ನ ವಯಸ್ಸು ಎಷ್ಟು ಆತನ ವಯಸ್ಸು ಎಷ್ಟು? ರಾಜೇಶ್ ತಂದೆ ಸಿ.ಪಿ. ಮೂಡಲಗಿರಿಯಪ್ಪ ಈ ಹಿಂದೆ ಜೆಡಿಎಸ್ನಲ್ಲಿ ಇದ್ದವರು. ಆ ವಿಶ್ವಾಸದಿಂದ ಕುಮಾರಸ್ವಾಮಿಯೇ ರಾಜೇಶ್ನನ್ನು ಬಿಜೆಪಿಗೆ ಕಳುಹಿಸಿದ್ದಾರೆ ಎಂದು ನಾನು ಹೇಳುವೆ’ ಎಂದರು.</p>.<p>ರಾಜಕೀಯವೇ ಬೇರೆ ಸ್ನೇಹವೇ ಬೇರೆ. ಕುಮಾರಸ್ವಾಮಿ ಜವಾಬ್ದಾರಿಯಿಂದ ರಾಜಕೀಯ ಹೇಳಿಕೆಗಳನ್ನು ಕೊಡಬೇಕು. ಕುಮಾರಸ್ವಾಮಿ ನೀಡುವ ರಾಜಕೀಯ ಹೇಳಿಕೆಗಳಿಗೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.</p>.<p>ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ನಾವು ಗೆಲವು ಸಾಧಿಸುತ್ತೇವೆ. ಶಿರಾದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಆದರೆ ಅನುಕಂಪ ಜೆಡಿಎಸ್ನವರ ಕೈ ಹಿಡಿಯುವುದಿಲ್ಲ ಎಂದು ತಿಳಿಸಿದರು.</p>.<p>ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳಬೇಕು. ಇದರಿಂದ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಧ್ಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಡಾ. ಸಿ.ಎಂ. ರಾಜೇಶ್ ಗೌಡ ಬಿಜೆಪಿ ಸೇರಲು ನಾನು ಕಾರಣ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ, ‘ಅವನಂತಹ ಪೆದ್ದ ಯಾರೂ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜೇಶ್, ನನ್ನ ಮಗನ ಸ್ನೇಹಿತ. ನನ್ನ ಸ್ನೇಹಿತ ಅಲ್ಲ. ನನ್ನ ವಯಸ್ಸು ಎಷ್ಟು ಆತನ ವಯಸ್ಸು ಎಷ್ಟು? ರಾಜೇಶ್ ತಂದೆ ಸಿ.ಪಿ. ಮೂಡಲಗಿರಿಯಪ್ಪ ಈ ಹಿಂದೆ ಜೆಡಿಎಸ್ನಲ್ಲಿ ಇದ್ದವರು. ಆ ವಿಶ್ವಾಸದಿಂದ ಕುಮಾರಸ್ವಾಮಿಯೇ ರಾಜೇಶ್ನನ್ನು ಬಿಜೆಪಿಗೆ ಕಳುಹಿಸಿದ್ದಾರೆ ಎಂದು ನಾನು ಹೇಳುವೆ’ ಎಂದರು.</p>.<p>ರಾಜಕೀಯವೇ ಬೇರೆ ಸ್ನೇಹವೇ ಬೇರೆ. ಕುಮಾರಸ್ವಾಮಿ ಜವಾಬ್ದಾರಿಯಿಂದ ರಾಜಕೀಯ ಹೇಳಿಕೆಗಳನ್ನು ಕೊಡಬೇಕು. ಕುಮಾರಸ್ವಾಮಿ ನೀಡುವ ರಾಜಕೀಯ ಹೇಳಿಕೆಗಳಿಗೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.</p>.<p>ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ನಾವು ಗೆಲವು ಸಾಧಿಸುತ್ತೇವೆ. ಶಿರಾದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಆದರೆ ಅನುಕಂಪ ಜೆಡಿಎಸ್ನವರ ಕೈ ಹಿಡಿಯುವುದಿಲ್ಲ ಎಂದು ತಿಳಿಸಿದರು.</p>.<p>ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳಬೇಕು. ಇದರಿಂದ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಧ್ಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>