ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ರಾಜಕಾರಣವೇ ಸಾಕು: ಸಿದ್ದರಾಮಯ್ಯ

Last Updated 23 ಮಾರ್ಚ್ 2021, 18:53 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಷ್ಟ್ರ ರಾಜಕಾರಣ ಪ್ರವೇಶಿಸುವ ಬಯಕೆ ಇಲ್ಲ. ನನ್ನ ರಾಜಕಾರಣ ಏನೇ ಇದ್ದರೂ ಕರ್ನಾಟಕಕ್ಕೆ ಸೀಮಿತ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಅನೌಪಚಾರಿಕವಾಗಿ ಮಾತನಾಡಿದ ಅವರು, ‘ಇಲ್ಲೇ ಉತ್ತಮ ರಾಜಕಾರಣ ಮಾಡಲು ಬಿಟ್ಟರೆ ಸಾಕು’ ಎಂದು ತಿಳಿಸಿದರು.

ಇತ್ತೀಚೆಗೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ‘ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು’ ಎಂದು ಹೇಳಿಕೆ ನೀಡಿದ್ದರು. ಇದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಸಿದ್ದರಾಮಯ್ಯ ‘ಅವರು ಏಕೆ ಹೇಳಿದ್ದಾರೋ ಗೊತ್ತಿಲ್ಲ. ನನಗೆ ರಾಷ್ಟ್ರ ರಾಜಕಾರಣ ಆಸಕ್ತಿ ಇಲ್ಲ ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT