<p><strong>ಶಿವಮೊಗ್ಗ: </strong>ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಮುಖಂಡರ ಜೊತೆ ಇದ್ದರೆ ಅವನನ್ನು ಅರೆಸ್ಟ್ ಮಾಡುವ ಧೈರ್ಯ ಸಿಸಿಬಿ ಪೊಲೀಸರಿಗೆ ಹೇಗೆ ಬರುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವನ್ಯಾವನೋ ಒಬ್ಬ ಸುನೀಲನ ಜೊತೆ ಸೂರ್ಯ, ಮೋಹನ್ ಅವರೆಲ್ಲಾ ಹೋಗಿದ್ದಾರೆ. ಡಕಾಯಿತಿ, ಕೊಲೆ ಕೇಸ್ನಲ್ಲಿ ಇದ್ದವನ ಜೊತೆ ಬಿಜೆಪಿ ಮುಖಂಡರೆಲ್ಲಾ ಸೇರಿಕೊಂಡಿದ್ದರು. ಇವರು ನೀತಿ ಹೇಳೋದು.ಬದನೆಕಾಯಿ ತಿನ್ನೋಕಾ' ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a data-ved="2ahUKEwjlosf649L7AhXXR2wGHb6qADEQFnoECA8QAQ" href="https://www.prajavani.net/district/bengaluru-city/rowdy-sunil-with-bjp-mp-in-bangalore-992774.html" ping="/url?sa=t&source=web&rct=j&url=https://www.prajavani.net/district/bengaluru-city/rowdy-sunil-with-bjp-mp-in-bangalore-992774.html&ved=2ahUKEwjlosf649L7AhXXR2wGHb6qADEQFnoECA8QAQ" target="_blank">ಬಿಜೆಪಿ ಸಂಸದರ ಜೊತೆ ರೌಡಿ ಸುನೀಲ್ ಪ್ರತ್ಯಕ್ಷ</a></p>.<p>ಸಿಸಿಬಿಯವರು ಸೈಲೆಂಟ್ ಸುನೀಲನಹುಡುಕುತ್ತಾ ಇದ್ದರೆ. ಅವನು ಬಿಜೆಪಿ ಮುಖಂಡರ ಜೊತೆಗೆ ಇದ್ದಾನೆ. ಆಡಳಿತ ಪಕ್ಷದ ಶಾಸಕರು, ಸಂಸದರು ಅವರ ಜೊತೆಗಿದ್ರೆ ಪೊಲೀಸರು ಹೇಗೆ ಅರೆಸ್ಟ್ ಮಾಡುತ್ತಾರೆ.ಕಾನೂನು ಕ್ರಮ ಕೈಗೊಳ್ಳೋಕೆ, ಶಿಕ್ಷೆ ಕೊಡಿಸೋಕೆ ಆಗುತ್ತಾ ? ಎಂದು ಪ್ರಶ್ನಿಸಿದರು.</p>.<p>ಮೊಹಮ್ಮದ್ ನಲಪಾಡ್ ಮೇಲೆ ಒಂದು ಕೇಸ್ ಇದೆ. ಆದರೆ, ಬಿಜೆಪಿ ನಾಯಕರ ಮೇಲೆ ಎಷ್ಟು ಕ್ರಿಮಿನಲ್ ಕೇಸ್ಗಳಿವೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ,'ಅಮಿತ್ ಶಾ ಅವರೇ ಕೊಲೆ ಪ್ರಕರಣದಲ್ಲಿ ಇದ್ದರು. ಅವರ ವಿರುದ್ಧ ಗಡಿಪಾರು ಆದೇಶವಿತ್ತು. ಹೀಗಾಗಿ ನಲಪಾಡ್ ಬಗ್ಗೆ ಮಾತನಾಡಲುಬಿಜೆಪಿಯವರಿಗೆ ಏನು ನೈತಿಕತೆ ಇದೆ' ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/chief-minister-basavaraj-bommai-says-there-are-rowdy-sheeters-in-the-congress-party-politics-bjp-992803.html" itemprop="url" target="_blank">ಕಾಂಗ್ರೆಸ್ನಲ್ಲಿ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಮುಖಂಡರ ಜೊತೆ ಇದ್ದರೆ ಅವನನ್ನು ಅರೆಸ್ಟ್ ಮಾಡುವ ಧೈರ್ಯ ಸಿಸಿಬಿ ಪೊಲೀಸರಿಗೆ ಹೇಗೆ ಬರುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವನ್ಯಾವನೋ ಒಬ್ಬ ಸುನೀಲನ ಜೊತೆ ಸೂರ್ಯ, ಮೋಹನ್ ಅವರೆಲ್ಲಾ ಹೋಗಿದ್ದಾರೆ. ಡಕಾಯಿತಿ, ಕೊಲೆ ಕೇಸ್ನಲ್ಲಿ ಇದ್ದವನ ಜೊತೆ ಬಿಜೆಪಿ ಮುಖಂಡರೆಲ್ಲಾ ಸೇರಿಕೊಂಡಿದ್ದರು. ಇವರು ನೀತಿ ಹೇಳೋದು.ಬದನೆಕಾಯಿ ತಿನ್ನೋಕಾ' ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a data-ved="2ahUKEwjlosf649L7AhXXR2wGHb6qADEQFnoECA8QAQ" href="https://www.prajavani.net/district/bengaluru-city/rowdy-sunil-with-bjp-mp-in-bangalore-992774.html" ping="/url?sa=t&source=web&rct=j&url=https://www.prajavani.net/district/bengaluru-city/rowdy-sunil-with-bjp-mp-in-bangalore-992774.html&ved=2ahUKEwjlosf649L7AhXXR2wGHb6qADEQFnoECA8QAQ" target="_blank">ಬಿಜೆಪಿ ಸಂಸದರ ಜೊತೆ ರೌಡಿ ಸುನೀಲ್ ಪ್ರತ್ಯಕ್ಷ</a></p>.<p>ಸಿಸಿಬಿಯವರು ಸೈಲೆಂಟ್ ಸುನೀಲನಹುಡುಕುತ್ತಾ ಇದ್ದರೆ. ಅವನು ಬಿಜೆಪಿ ಮುಖಂಡರ ಜೊತೆಗೆ ಇದ್ದಾನೆ. ಆಡಳಿತ ಪಕ್ಷದ ಶಾಸಕರು, ಸಂಸದರು ಅವರ ಜೊತೆಗಿದ್ರೆ ಪೊಲೀಸರು ಹೇಗೆ ಅರೆಸ್ಟ್ ಮಾಡುತ್ತಾರೆ.ಕಾನೂನು ಕ್ರಮ ಕೈಗೊಳ್ಳೋಕೆ, ಶಿಕ್ಷೆ ಕೊಡಿಸೋಕೆ ಆಗುತ್ತಾ ? ಎಂದು ಪ್ರಶ್ನಿಸಿದರು.</p>.<p>ಮೊಹಮ್ಮದ್ ನಲಪಾಡ್ ಮೇಲೆ ಒಂದು ಕೇಸ್ ಇದೆ. ಆದರೆ, ಬಿಜೆಪಿ ನಾಯಕರ ಮೇಲೆ ಎಷ್ಟು ಕ್ರಿಮಿನಲ್ ಕೇಸ್ಗಳಿವೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ,'ಅಮಿತ್ ಶಾ ಅವರೇ ಕೊಲೆ ಪ್ರಕರಣದಲ್ಲಿ ಇದ್ದರು. ಅವರ ವಿರುದ್ಧ ಗಡಿಪಾರು ಆದೇಶವಿತ್ತು. ಹೀಗಾಗಿ ನಲಪಾಡ್ ಬಗ್ಗೆ ಮಾತನಾಡಲುಬಿಜೆಪಿಯವರಿಗೆ ಏನು ನೈತಿಕತೆ ಇದೆ' ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/chief-minister-basavaraj-bommai-says-there-are-rowdy-sheeters-in-the-congress-party-politics-bjp-992803.html" itemprop="url" target="_blank">ಕಾಂಗ್ರೆಸ್ನಲ್ಲಿ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>