ಗುರುವಾರ ಬೆಳಿಗ್ಗೆ ಕೊಡಗು ಜಿಲ್ಲೆಯ ಪೊನ್ನಂಪೇಟೆ, ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟಿ ಪ್ರದೇಶಕ್ಕೆ ಭೇಟಿ ನೀಡಿ ಆ ಭಾಗದ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಬಳಿಕ, ದೇವರಕೊಲ್ಲಿ ರಾಜ್ಯ ಹೆದ್ದಾರಿ, ಮಡಿಕೇರಿ, ಕುಶಾಲನಗರದ ಮಳೆಹಾನಿ ಪ್ರದೇಶಗಳಿಗೂ ಭೇಟಿ ನೀಡಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.