ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ: ಇಂದಿನಿಂದ ಸಿದ್ದರಾಮಯ್ಯ ಪ್ರವಾಸ

Last Updated 17 ಆಗಸ್ಟ್ 2022, 21:32 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರದಿಂದ ಎರಡು ದಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಗುರುವಾರ ಬೆಳಿಗ್ಗೆ ಕೊಡಗು ಜಿಲ್ಲೆಯ ಪೊನ್ನಂಪೇಟೆ, ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟಿ ಪ್ರದೇಶಕ್ಕೆ ಭೇಟಿ ನೀಡಿ ಆ ಭಾಗದ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಬಳಿಕ, ದೇವರಕೊಲ್ಲಿ ರಾಜ್ಯ ಹೆದ್ದಾರಿ, ಮಡಿಕೇರಿ, ಕುಶಾಲನಗರದ ಮಳೆಹಾನಿ ಪ್ರದೇಶಗಳಿಗೂ ಭೇಟಿ ನೀಡಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮರುದಿನ (ಆ. 19) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT