<p><strong>ಬೆಂಗಳೂರು: </strong>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡಿದರೆ ಬಿಜೆಪಿ ವೀರಶೈವ–ಲಿಂಗಾಯತರ ಅವಕೃಪೆಗೆ ಒಳಗಾಗಬೇಕಾಗುತ್ತದೆ’ ಎಂದು ಕಾಂಗ್ರೆಸ್ನ ಹಿರಿಯ ಶಾಸಕರೂ ಲಿಂಗಾಯತ ಸಮುದಾಯದ ಪ್ರಮುಖರೂ ಆಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.</p>.<p><strong>ಇದನ್ನು ಓದಿ:</strong><a href="https://www.prajavani.net/karnataka-news/dk-shivakumar-says-lingayats-are-not-bjps-assets-848952.html" target="_blank">ಲಿಂಗಾಯತರು ಬಿಜೆಪಿ ಆಸ್ತಿಯಲ್ಲ: ಡಿ.ಕೆ. ಶಿವಕುಮಾರ್</a></p>.<p>ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳ ಜತೆ ಸೋಮವಾರ ಸಂಜೆ ಯಡಿಯೂರಪ್ಪ ಅವರನ್ನು ಭೇಟಿಮಾಡಿದ ಶಾಮನೂರು, ಕೆಲಕಾಲ ಮಾತುಕತೆ ನಡೆಸಿದರು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,‘ಹಿಂದೆ ನಮ್ಮ ಸಮುದಾಯಕ್ಕೆ ಸೇರಿದ ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ, ಎಸ್.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಬಳಿಕ ರಾಜಕೀಯವಾಗಿ ಏನಾಯಿತು ಎಂಬುದನ್ನು ಬಿಜೆಪಿ ನಾಯಕರು ನೆನಪಿಸಿಕೊಳ್ಳಬೇಕು’ ಎಂದರು.</p>.<p>30 ವರ್ಷಗಳಿಗೂ ಹೆಚ್ಚು ಕಾಲ ಬಿಜೆಪಿಗಾಗಿ ದುಡಿದವರು ಯಡಿಯೂರಪ್ಪ. ಅವರ ಹಿಂದೆ ಜನರಿದ್ದಾರೆ. ಈಗ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದರೆ ಬಿಜೆಪಿಗೆ ಅನುಕೂಲವಾಗುವುದಿಲ್ಲ. ಅದರಿಂದ ಬೇರೆಯವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.</p>.<p>‘ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಈ ಕುರಿತು ವದಂತಿಗಳು ಹರಿದಾಡುತ್ತಿವೆ. ಸಮುದಾಯದ ಬೇರೆ ಯಾರಿಗೇ ಮುಖ್ಯಮಂತ್ರಿ ಸ್ಥಾನ ನೀಡಿದರೂ ಯಡಿಯೂರಪ್ಪ ಇದ್ದಂತೆ ಆಗುವುದಿಲ್ಲ. ಯಡಿಯೂರಪ್ಪ ಅವರ ಹಿಂದೆ ಮಾತ್ರ ಸಮುದಾಯದ ಬೆಂಬಲ ಇದೆ’ ಎಂದರು.</p>.<p><strong>ಎಂ.ಬಿ. ಪಾಟೀಲ ಬೆಂಬಲ: </strong>ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ ಕೂಡ ಒತ್ತಾಯಿಸಿದ್ದಾರೆ. ಸೋಮವಾರ ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಪಾಟೀಲ, ಬಳಿಕ ಈ ಕುರಿತು ಟ್ವೀಟ್ ಮಾಡಿದ್ದಾರೆ.</p>.<p>‘ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ಪಾತ್ರರಾಗುತ್ತಾರೆ. ಯಡಿಯೂರಪ್ಪ ಅವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ ಅವರನ್ನು ಘನತೆ ಹಾಗೂ ಮರ್ಯಾದೆಯಿಂದ ನಡೆಸಿಕೊಳ್ಳಬೇಕು’ ಎಂದು ಪಾಟೀಲ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡಿದರೆ ಬಿಜೆಪಿ ವೀರಶೈವ–ಲಿಂಗಾಯತರ ಅವಕೃಪೆಗೆ ಒಳಗಾಗಬೇಕಾಗುತ್ತದೆ’ ಎಂದು ಕಾಂಗ್ರೆಸ್ನ ಹಿರಿಯ ಶಾಸಕರೂ ಲಿಂಗಾಯತ ಸಮುದಾಯದ ಪ್ರಮುಖರೂ ಆಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.</p>.<p><strong>ಇದನ್ನು ಓದಿ:</strong><a href="https://www.prajavani.net/karnataka-news/dk-shivakumar-says-lingayats-are-not-bjps-assets-848952.html" target="_blank">ಲಿಂಗಾಯತರು ಬಿಜೆಪಿ ಆಸ್ತಿಯಲ್ಲ: ಡಿ.ಕೆ. ಶಿವಕುಮಾರ್</a></p>.<p>ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳ ಜತೆ ಸೋಮವಾರ ಸಂಜೆ ಯಡಿಯೂರಪ್ಪ ಅವರನ್ನು ಭೇಟಿಮಾಡಿದ ಶಾಮನೂರು, ಕೆಲಕಾಲ ಮಾತುಕತೆ ನಡೆಸಿದರು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,‘ಹಿಂದೆ ನಮ್ಮ ಸಮುದಾಯಕ್ಕೆ ಸೇರಿದ ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ, ಎಸ್.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಬಳಿಕ ರಾಜಕೀಯವಾಗಿ ಏನಾಯಿತು ಎಂಬುದನ್ನು ಬಿಜೆಪಿ ನಾಯಕರು ನೆನಪಿಸಿಕೊಳ್ಳಬೇಕು’ ಎಂದರು.</p>.<p>30 ವರ್ಷಗಳಿಗೂ ಹೆಚ್ಚು ಕಾಲ ಬಿಜೆಪಿಗಾಗಿ ದುಡಿದವರು ಯಡಿಯೂರಪ್ಪ. ಅವರ ಹಿಂದೆ ಜನರಿದ್ದಾರೆ. ಈಗ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದರೆ ಬಿಜೆಪಿಗೆ ಅನುಕೂಲವಾಗುವುದಿಲ್ಲ. ಅದರಿಂದ ಬೇರೆಯವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.</p>.<p>‘ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಈ ಕುರಿತು ವದಂತಿಗಳು ಹರಿದಾಡುತ್ತಿವೆ. ಸಮುದಾಯದ ಬೇರೆ ಯಾರಿಗೇ ಮುಖ್ಯಮಂತ್ರಿ ಸ್ಥಾನ ನೀಡಿದರೂ ಯಡಿಯೂರಪ್ಪ ಇದ್ದಂತೆ ಆಗುವುದಿಲ್ಲ. ಯಡಿಯೂರಪ್ಪ ಅವರ ಹಿಂದೆ ಮಾತ್ರ ಸಮುದಾಯದ ಬೆಂಬಲ ಇದೆ’ ಎಂದರು.</p>.<p><strong>ಎಂ.ಬಿ. ಪಾಟೀಲ ಬೆಂಬಲ: </strong>ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ ಕೂಡ ಒತ್ತಾಯಿಸಿದ್ದಾರೆ. ಸೋಮವಾರ ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಪಾಟೀಲ, ಬಳಿಕ ಈ ಕುರಿತು ಟ್ವೀಟ್ ಮಾಡಿದ್ದಾರೆ.</p>.<p>‘ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ಪಾತ್ರರಾಗುತ್ತಾರೆ. ಯಡಿಯೂರಪ್ಪ ಅವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ ಅವರನ್ನು ಘನತೆ ಹಾಗೂ ಮರ್ಯಾದೆಯಿಂದ ನಡೆಸಿಕೊಳ್ಳಬೇಕು’ ಎಂದು ಪಾಟೀಲ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>