ಕೆಪಿಸಿಸಿ ಕಾರ್ಯಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಹೊಂದಿರುವ ಕೆಪಿಸಿಸಿ ಪದಾಧಿಕಾರಿಗಳು, ಸ್ಥಳೀಯ ನಾಯಕರು ಚರ್ಚಿಸಿ ಶಿಬಿರದ ದಿನ ನಿಗದಿಪಡಿಸಬೇಕು. ಜಿಲ್ಲೆಗೆ ಸಂಬಂಧಿಸಿ ರಾಜ್ಯ ನಾಯಕರು, ಜಿಲ್ಲೆಯ ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು, ಶಾಸಕರು, ಮಾಜಿ ಶಾಸಕರು. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಜಿ, ಹಾಲಿ ಸೇರಿದಂತೆ ಜಿಲ್ಲೆಯ ಪ್ರಮುಖ ಎಲ್ಲ ನಾಯಕರು ಶಿಬಿರದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದೂ ಅವರು ಸೂಚಿಸಿದ್ದಾರೆ.