ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮೇಕೆದಾಟು ಪಾದಯಾತ್ರೆಯ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಅಗತ್ಯವಿತ್ತೇ ಎಂದು ಕೆಪಿಸಿಸಿಯನ್ನು ಪ್ರಶ್ನಿಸಿದೆ. ಕಾಂಗ್ರೆಸ್ಸಿಗರೇ, ಜನರ ಭಾವನೆಯನ್ನು ಧಿಕ್ಕರಿಸಿದಿರಿ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದಿರಿ. ನ್ಯಾಯಾಲಯಕ್ಕಾದರೂ ತಲೆಬಾಗುವಿರಾ?’ ಎಂದು ಬಿಜೆಪಿ ಪ್ರಶ್ನಿಸಿದೆ.