ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆ ಆರಂಭಿಸಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಆದ ಕಾರಣ ಪಾದಯಾತ್ರೆಯ ವಿಚಾರ ಹೈಕೋರ್ಟ್ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಳಿಸಲಾಗಿತ್ತು.