ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ದರ್ಗಾ ತೆರವು ವಿಷಯದಲ್ಲಿ ಕೆಲವರು ವ್ಯತಿರಿಕ್ತ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ. ನೀವು ದರ್ಗಾ ತೆರವು ಮಾಡಿ, ನಾವು ಅಧಿವೇಶನದಲ್ಲಿ ವಿರೋಧಿಸುತ್ತೇವೆ ಎಂದು ಅವರೇ ಹೇಳಿದ್ದರು. ಇಂತಹ ಗೊಂದಲದ ವಾತಾವರಣ ಯಾಕೆ ನಿರ್ಮಿಸಬೇಕು? ಹಿಂದಿನಿಂದಲೂ ಅವರು ತುಷ್ಟೀಕರಣ ರಾಜಕಾರಣ ಮಾಡುತ್ತ, ಮುಸ್ಲಿಮರನ್ನು ದಿಕ್ಕು ತಪ್ಪಿಸುತ್ತಲೇ ಬಂದಿದ್ದಾರೆ' ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದರು.