ವಿರೋಧ ಪಕ್ಷಗಳು ಸಂಸತ್ ಅಧಿವೇಶನವನ್ನು ಸರಿಯಾಗಿ ಬಳಸಿಕೊಳ್ಳಬೇಕಿತ್ತು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿ, ಕೋವಿಡ್ ಬಿಕ್ಕಟ್ಟು ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯ ಪಟ್ಟಿಯಲ್ಲಿದ್ದವು. ಹಿಂದೆ ರಫೇಲ್ ಹಗರಣದ ಹೆಸರಿನಲ್ಲಿ ಕಾಂಗ್ರೆಸ್ ಸದಸ್ಯರು ಸಂಸತ್ತಿನಲ್ಲಿ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದ್ದರು. ಈಗಲೂ ಅದೇ ರೀತಿ ಆಗುತ್ತಿದೆ ಎಂದು ಟೀಕಿಸಿದರು.