‘ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ. ಸಿಟಿ ರವಿಗೂ ಈ ಚಟವಿದೆ.ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ ಈ ನಾಡಿಗೆ ತಿಳಿದಿದೆ.ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು? ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಲಿ.ಪುಂಡ– ಪೋಕರಿಯಂತೆ ಮಾತನಾಡಿದರೆ ಗೌರವ ಉಳಿಯುವುದಿಲ್ಲ’ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.