<p><strong>ಬೆಂಗಳೂರು: </strong>ವಿಧಾನಮಂಡಲದ ಜಂಟಿ ಸ್ಥಾಯಿ ಸಮಿತಿಗಳು ಹಾಗೂ ವಿಧಾನಸಭೆಯ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.</p>.<p>ಜಂಟಿ ಸಮಿತಿಗಳ ಪೈಕಿ ಗ್ರಂಥಾಲಯ ಸಮಿತಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷರಾಗಿರುತ್ತಾರೆ. ವಿಧಾನಸಭೆಯ ಖಾಸಗಿ ಸದಸ್ಯರುಗಳ ವಿಧೇಯಕ ಮತ್ತು ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗಳಿಗೆ ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅಧ್ಯಕ್ಷರಾಗಿರುತ್ತಾರೆ.</p>.<p>ಇತರ ಜಂಟಿ ಸಮಿತಿಗಳ ಅಧ್ಯಕ್ಷರು: ಸಾರ್ವಜನಿಕ ಉದ್ದಿಮೆಗಳ ಸಮಿತಿ– ಜಿ.ಎಚ್. ತಿಪ್ಪಾರೆಡ್ಡಿ,; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ– ಎಂ.ಪಿ. ಕುಮಾರಸ್ವಾಮಿ; ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ– ಎಸ್. ಕುಮಾರ್ ಬಂಗಾರಪ್ಪ; ಅಧೀನ ಶಾಸನ ರಚನಾ ಸಮಿತಿ– ಎಲ್.ಎ. ರವಿ ಸುಬ್ರಹ್ಮಣ್ಯ; ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ– ಸಾ.ರಾ. ಮಹೇಶ್; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ– ಕೆ. ಪೂರ್ಣಿಮಾ ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಮಿತಿ– ಜಿ. ಸೋಮಶೇಖರ ರೆಡ್ಡಿ.</p>.<p>ವಿಧಾನಸಭೆಯ ಸಮಿತಿಗಳು: ಅಂದಾಜುಗಳ ಸಮಿತಿ– ಅಭಯ ಪಾಟೀಲ; ಸರ್ಕಾರಿ ಭರವಸೆಗಳ ಸಮಿತಿ– ಕೆ. ರಘುಪತಿ ಭಟ್; ಹಕ್ಕುಬಾಧ್ಯತೆಗಳ ಸಮಿತಿ– ಬಸನಗೌಡ ಆರ್. ಪಾಟೀಲ ಯತ್ನಾಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನಮಂಡಲದ ಜಂಟಿ ಸ್ಥಾಯಿ ಸಮಿತಿಗಳು ಹಾಗೂ ವಿಧಾನಸಭೆಯ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.</p>.<p>ಜಂಟಿ ಸಮಿತಿಗಳ ಪೈಕಿ ಗ್ರಂಥಾಲಯ ಸಮಿತಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷರಾಗಿರುತ್ತಾರೆ. ವಿಧಾನಸಭೆಯ ಖಾಸಗಿ ಸದಸ್ಯರುಗಳ ವಿಧೇಯಕ ಮತ್ತು ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗಳಿಗೆ ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅಧ್ಯಕ್ಷರಾಗಿರುತ್ತಾರೆ.</p>.<p>ಇತರ ಜಂಟಿ ಸಮಿತಿಗಳ ಅಧ್ಯಕ್ಷರು: ಸಾರ್ವಜನಿಕ ಉದ್ದಿಮೆಗಳ ಸಮಿತಿ– ಜಿ.ಎಚ್. ತಿಪ್ಪಾರೆಡ್ಡಿ,; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ– ಎಂ.ಪಿ. ಕುಮಾರಸ್ವಾಮಿ; ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ– ಎಸ್. ಕುಮಾರ್ ಬಂಗಾರಪ್ಪ; ಅಧೀನ ಶಾಸನ ರಚನಾ ಸಮಿತಿ– ಎಲ್.ಎ. ರವಿ ಸುಬ್ರಹ್ಮಣ್ಯ; ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ– ಸಾ.ರಾ. ಮಹೇಶ್; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ– ಕೆ. ಪೂರ್ಣಿಮಾ ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಮಿತಿ– ಜಿ. ಸೋಮಶೇಖರ ರೆಡ್ಡಿ.</p>.<p>ವಿಧಾನಸಭೆಯ ಸಮಿತಿಗಳು: ಅಂದಾಜುಗಳ ಸಮಿತಿ– ಅಭಯ ಪಾಟೀಲ; ಸರ್ಕಾರಿ ಭರವಸೆಗಳ ಸಮಿತಿ– ಕೆ. ರಘುಪತಿ ಭಟ್; ಹಕ್ಕುಬಾಧ್ಯತೆಗಳ ಸಮಿತಿ– ಬಸನಗೌಡ ಆರ್. ಪಾಟೀಲ ಯತ್ನಾಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>