ಕಾಂಗ್ರೆಸ್ನ ಯು.ಬಿ. ವೆಂಕಟೇಶ್, ‘ಸಾಲ ಮಾಡಿ ನಾವು ತುಪ್ಪ ತಿನ್ನುವಂತಾಗಿದೆ’ ಎಂದರು. ‘ನಿಮ್ಮ ಸರ್ಕಾರದ ಅವಧಿಯಲ್ಲಿ ಸಾಲ ಯಾಕೆ ಮಾಡಿದಿರಿ’ ಎಂದು ಮಾಧುಸ್ವಾಮಿ ಪ್ರಶ್ನಿಸಿದರು. ಆಗ, ಜೆಡಿಎಸ್ನ ಬಸವರಾಜ ಹೊರಟ್ಟಿ, ‘ನಿಮ್ಮ ಪಕ್ಷದ ನಾಯಕರು ರೈತರ ಸಾಲ ಮನ್ನಾ ಮಾಡಿ ಎಂದು ಪಟ್ಟುಹಿಡಿದು, ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರನ್ನು ಉಸಿರಾಡಲು ಬಿಡಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.