<p><strong>ಕಾರವಾರ: </strong>ಕಾಂಗ್ರೆಸ್ ಪಕ್ಷವೇ ಭಯೋತ್ಪಾದಕ ಸಂಘಟನೆ. ಅವರ ತುಷ್ಟೀಕರಣ ನೀತಿಯಿಂದಲೇ ಮತೀಯ ಗಲಭೆಗಳು ನಡೆದಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.</p>.<p>ಇಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಬಿಜೆಪಿ ಅವಧಿಯಲ್ಲಿ ಹಿಂದೂಗಳ ಅತಿ ಹೆಚ್ಚು ಹತ್ಯೆ ಆಗಿದೆ' ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.</p>.<p>'ಕಾಂಗ್ರೆಸ್ ಆಡಳಿತ ಮತೀಯ ಗಲಭೆಗೆ ಪ್ರೇರಣೆ ನೀಡಿತ್ತು. ಪಿ.ಎಫ್.ಐ. ಕಾರ್ಯಕರ್ತರನ್ನು ಜೈಲಿನಿಂದ ಸಿದ್ದರಾಮಯ್ಯ ಬಿಡುಗಡೆ ಮಾಡಿಸಿದ್ದರು. ಸಿದ್ದರಾಮಯ್ಯ ಆಡಳಿತ ಕಾಲದಲ್ಲಿ 25 ಮಂದಿ ಹಿಂದೂಗಳ ಹತ್ಯೆಯಾಗಿತ್ತು' ಎಂದರು.</p>.<p>'ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವ ಹೊಂದಿರುವ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೆ ಜಾತಿ ಹೇಳಿಕೆ ನೀಡುತ್ತಿದ್ದಾರೆ' ಎಂದು ಲೇವಡಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಕಾಂಗ್ರೆಸ್ ಪಕ್ಷವೇ ಭಯೋತ್ಪಾದಕ ಸಂಘಟನೆ. ಅವರ ತುಷ್ಟೀಕರಣ ನೀತಿಯಿಂದಲೇ ಮತೀಯ ಗಲಭೆಗಳು ನಡೆದಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.</p>.<p>ಇಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಬಿಜೆಪಿ ಅವಧಿಯಲ್ಲಿ ಹಿಂದೂಗಳ ಅತಿ ಹೆಚ್ಚು ಹತ್ಯೆ ಆಗಿದೆ' ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.</p>.<p>'ಕಾಂಗ್ರೆಸ್ ಆಡಳಿತ ಮತೀಯ ಗಲಭೆಗೆ ಪ್ರೇರಣೆ ನೀಡಿತ್ತು. ಪಿ.ಎಫ್.ಐ. ಕಾರ್ಯಕರ್ತರನ್ನು ಜೈಲಿನಿಂದ ಸಿದ್ದರಾಮಯ್ಯ ಬಿಡುಗಡೆ ಮಾಡಿಸಿದ್ದರು. ಸಿದ್ದರಾಮಯ್ಯ ಆಡಳಿತ ಕಾಲದಲ್ಲಿ 25 ಮಂದಿ ಹಿಂದೂಗಳ ಹತ್ಯೆಯಾಗಿತ್ತು' ಎಂದರು.</p>.<p>'ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವ ಹೊಂದಿರುವ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೆ ಜಾತಿ ಹೇಳಿಕೆ ನೀಡುತ್ತಿದ್ದಾರೆ' ಎಂದು ಲೇವಡಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>