‘ರಾಜ್ಯಕ್ಕೆ ಬರಬೇಕಿದ್ದ ಉದ್ಯಮ ಗಳು ಚೆನ್ನೈ, ಹೈದರಾಬಾದ್ನತ್ತ ಮುಖ ಮಾಡಿವೆ. ರಾಜ್ಯದ ವಿವಿಧ ಇಲಾಖೆ ಗಳಲ್ಲಿ ಖಾಲಿಯಿರುವ ಲಕ್ಷಾಂತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಏಳ್ಗೆಗೆ 371 (ಜೆ) ಕಲಂ ಜಾರಿಗೊಳಿಸಲು ಶ್ರಮಿಸಿದರು. ಆದರೆ, ಇದನ್ನು ಸಹಿಸದ ಬಿಜೆಪಿ ಇಲ್ಲಿನ ಜನರಿಗೆ ಉದ್ಯೋಗ ನೀಡುತ್ತಿಲ್ಲ ’ ಎಂದರು.