ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಕೊರೊನಾ ಸೋಂಕಿನ ಸಂಕಷ್ಟದ ಕಾಲದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ದರ ಏರಿಕೆ ಮಾಡುತ್ತಿದೆ. ಇದರಿಂದ ಸಾಮಾನ್ಯ ಜನರು ಜೀವನ ನಿರ್ವಹಣೆ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರದ ಈ ನಿಲುವನ್ನು ವಿರೋಧಿಸಿ ರಾಜ್ಯದಲ್ಲಿ ಐದು ದಿನಗಳ ಕಾಲ 5,000 ಪೆಟ್ರೋಲ್ ಬಂಕ್ಗಳ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದರು.