<p><strong>ಬೆಂಗಳೂರು:</strong> ‘ಡಿನೋಟಿಫಿಕೇಷನ್ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ಬೆಂಗಳೂರು ನಗರ ಪ್ರಚಾರ ಸಮಿತಿ ಸದಸ್ಯರು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಡಿನೋಟಿಫಿಕೇಷನ್ ಹಗರಣಗಳ ಮೂಲಕ ಯಡಿಯೂರಪ್ಪ ಈ ಹಿಂದೆ ಜೈಲುಪಾಲಾಗಿದ್ದರು. ಈಗ ಅವರು ಮತ್ತೆ ಭೂ ಕಂಟಕದಲ್ಲಿ ಸಿಲುಕಿದ್ದಾರೆ. ಆದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಅವರ ಭ್ರಷ್ಟಾಚಾರಕ್ಕೆ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವರು ಸಹಕಾರ ನೀಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ದೂರಿದರು.</p>.<p>‘ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಇದರಲ್ಲಿ ಮೋದಿಯವರ ಪಾಲು ಎಷ್ಟೆಂದು ಬಹಿರಂಗಪಡಿಸಬೇಕು’ ಎಂದರು.</p>.<p>‘ಡಿನೋಟಿಫಿಕೇಷನ್ ಹಗರಣದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಸಿರುವ ಪಕ್ಷ ಬಿಜೆಪಿ. ಭ್ರಷ್ಟಾಚಾರಕ್ಕೆ ಬೆಂಬಲವಿದ್ದರೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು. ಇಲ್ಲದಿದ್ದರೆ, ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸಬೇಕು’ ಎಂದೂ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಜನಾರ್ದನ್, ಆನಂದ್, ಶೇಖರ್, ಸಲೀಮ್, ಪ್ರಕಾಶ್ ಉಮೇಶ್, ಪುಟ್ಟರಾಜು, ಶಶಿಭೂಷಣ್ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಡಿನೋಟಿಫಿಕೇಷನ್ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ಬೆಂಗಳೂರು ನಗರ ಪ್ರಚಾರ ಸಮಿತಿ ಸದಸ್ಯರು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಡಿನೋಟಿಫಿಕೇಷನ್ ಹಗರಣಗಳ ಮೂಲಕ ಯಡಿಯೂರಪ್ಪ ಈ ಹಿಂದೆ ಜೈಲುಪಾಲಾಗಿದ್ದರು. ಈಗ ಅವರು ಮತ್ತೆ ಭೂ ಕಂಟಕದಲ್ಲಿ ಸಿಲುಕಿದ್ದಾರೆ. ಆದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಅವರ ಭ್ರಷ್ಟಾಚಾರಕ್ಕೆ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವರು ಸಹಕಾರ ನೀಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ದೂರಿದರು.</p>.<p>‘ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಇದರಲ್ಲಿ ಮೋದಿಯವರ ಪಾಲು ಎಷ್ಟೆಂದು ಬಹಿರಂಗಪಡಿಸಬೇಕು’ ಎಂದರು.</p>.<p>‘ಡಿನೋಟಿಫಿಕೇಷನ್ ಹಗರಣದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಸಿರುವ ಪಕ್ಷ ಬಿಜೆಪಿ. ಭ್ರಷ್ಟಾಚಾರಕ್ಕೆ ಬೆಂಬಲವಿದ್ದರೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು. ಇಲ್ಲದಿದ್ದರೆ, ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸಬೇಕು’ ಎಂದೂ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಜನಾರ್ದನ್, ಆನಂದ್, ಶೇಖರ್, ಸಲೀಮ್, ಪ್ರಕಾಶ್ ಉಮೇಶ್, ಪುಟ್ಟರಾಜು, ಶಶಿಭೂಷಣ್ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>