ಚೀಟಿ ತಿಂದವರು ತಿಹಾರ್ ಜೈಲಿಗೆ ಹೋಗಿದ್ದಾರೆ, ಪ್ರತಿಭಟನೆ ನಡೆಸಿದವರು ಜೈಲಿಗೆ ಹೋಗುತ್ತಾರೆ ಎಂಬ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 'ಇವರಿಗೆ ಸಂವಿಧಾನ, ಕಾನೂನು, ಮೂಲಭೂತ ಹಕ್ಕುಗಳ ಬಗ್ಗೆ ತಿಳಿದಿಲ್ಲವೆ? ಶಾಂತಿಯುತ ಪ್ರತಿಭಟನೆಗೆ ಕಾನೂನಿನಲ್ಲಿ ಅವಕಾಶವಿದೆ ಎಂಬುದು ಗೊತ್ತಿಲ್ಲವೆ? ಹಾಗಿದ್ದರೆ ಇವರೇಕೆ ಹಿಂದೆ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದರು' ಎಂದು ಕೇಳಿದರು.