ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಭೆಯಲ್ಲಿ ಮಾಜಿ ಮೇಯರ್ ಜಿ. ಪದ್ಮಾವತಿ, ಪಾಲಿಕೆ ಮಾಜಿ ಸದಸ್ಯ ಕೃಷ್ಣಮೂರ್ತಿ ಸೇರಿ ಹಲವು ಮುಖಂಡರು ಇದ್ದರು. ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡ ಎಚ್.ಎಂ. ರೇವಣ್ಣ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜಕುಮಾರ್, ಪಾಲಿಕೆ ಮಾಜಿ ಸದಸ್ಯರಾದ ಎಂ. ಶಿವರಾಜು, ಎಸ್. ಕೇಶವಮೂರ್ತಿ ಅವರೂ ಪಾಲ್ಗೊಂಡಿದ್ದರು.