ಕಲಬುರ್ಗಿ: ‘ಕೇಂದ್ರ ಸರ್ಕಾರವು ಕೃಷಿ, ಎಪಿಎಂಸಿ ಮತ್ತು ಅವಶ್ಯಕ ವಸ್ತುಗಳ ಕಾಯ್ದೆಗೆ ಸಂಬಂಧಿಸಿದಂತೆ ಮಾಡಿರುವ ತಿದ್ದುಪಡಿ ರೈತರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ಮಾರಕವಾಗಿದ್ದು, ಇದರ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಲಿದೆ’ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.