'ಸಿ.ಟಿ. ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ ರಾಶಿ, ಜೊತೆಗೊಂದು ಮಾರಕಾಸ್ತ್ರ ಇರುತ್ತದೆ. ಈ 'ಸಿಟಿ' ರವಿಗೂ, ಕಾರು ಆಘಾತಕ್ಕೂ, 'ಓಟಿ' ಮದ್ಯಕ್ಕೂ ಏನು ಈ ಜನ್ಮಾಂತರದ ಸಂಬಂಧ! ಧರ್ಮ, ಸಂಸ್ಕೃತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆ!' ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.