ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಕಚೇರಿಯಿಂದ ಕಡತ ನಾಪತ್ತೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

Last Updated 26 ನವೆಂಬರ್ 2022, 14:40 IST
ಅಕ್ಷರ ಗಾತ್ರ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಮಹತ್ವದ ಕಡತವೊಂದು ಕಾಣೆಯಾಗಿದೆ. ಕಡತವನ್ನೇ ರಕ್ಷಿಸಲಾಗದವರು ರಾಜ್ಯವನ್ನು ರಕ್ಷಿಸಲು ಸಾಧ್ಯವೇ? ಎಂದು ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಕಡತ ನಾಪತ್ತೆ ವಿಚಾರವಾಗಿ #SayCM ಟ್ಯಾಗ್‌ ಬಳಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, ಮುಖ್ಯಮಂತ್ರಿ ಹಾಗೂ ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದೆ.

ಮುಖ್ಯಮಂತ್ರಿಯವರ ಕಚೇರಿಯಿಂದ ಮಹತ್ವದ ಕಡತವೊಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ.ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ?ಕಚೇರಿಯು ಮುಖ್ಯಮಂತ್ರಿ ಬೊಮ್ಮಾಯಿ ಅವರ ಹಿಡಿತದಲ್ಲಿ ಇಲ್ಲವೇ?ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ? ಎಂದು ಕಾಂಗ್ರೆಸ್ಆಕ್ರೋಶ ವ್ಯಕ್ತಪಡಿಸಿದೆ..

ಮುಖ್ಯಮಂತ್ರಿ ಕಚೇರಿಯಲ್ಲಿರುವಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಬಂದಿದೆ.ಸಿಎಂ ಕಾರ್ಯದರ್ಶಿಯ ಹನಿಟ್ರಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ. ಬೊಮ್ಮಾಯಿ ಅವರೇ, ಹನಿಟ್ರಾಪ್‌ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ? ಎಂದು ಪ್ರಶ್ನಿಸಿದೆ.

ಬೊಮ್ಮಾಯಿ ಅವರೇ, ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ?ಇಲಿ ಕಚ್ಚಿಕೊಂಡು ಹೋಯಿತೇ?ಹೆಗ್ಗಣ ಹೊತ್ತುಕೊಂಡು ಹೋಯಿತೇ?ಗಾಳಿಯಲ್ಲಿ ಹಾರಿ ಹೋಯಿತೇ?ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು 'ಯುಪಿ ಮಾಡೆಲ್' ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ? ಎಂದು ಛೇಡಿಸಿದೆ.

ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸರ್ಕಾರಮತದಾರರ ಮಾಹಿತಿ ಕಳ್ಳತನದ ಮೂಲಕ ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದೆ.ಜನರ ಸಂವಿಧಾನದತ್ತವಾದ ಮತದಾನದ ಹಕ್ಕನ್ನೇ ಕಸಿದು ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಹೊರಟಿದೆ.ಬಿಜೆಪಿಯುಶಾಸಕರ ಕಳ್ಳತನ, ಮತದಾರರ ಮಾಹಿತಿ ಕಳ್ಳತನ ಎಂಬ ಕ್ಷುದ್ರ ರಾಜಕಾರಣದಿಂದಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಎಂದು ಗುಡುಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT