– ಕಾಂಗ್ರೆಸ್ ಮುಖಂಡರ ನಡುವೆ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು ಹೀಗೆ.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೇರೆ ಪಕ್ಷದ ಬಗ್ಗೆ ಚರ್ಚೆ ಮಾಡುವುದು ಸೂಕ್ತ ಅಲ್ಲ. ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೊಲಿಸುವುದು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ’ ಎಂದರು.
‘ಉಳಿದಿರುವ ಅವಧಿಯಲ್ಲಿ ಇನ್ನೂ ಉತ್ತಮ ಆಡಳಿತ ಕೊಟ್ಟು ಜನಪ್ರಿಯತೆಯನ್ನು ಮತ್ತಷ್ಟು ಬೆಳೆಸಿಕೊಳ್ಳುತ್ತೇವೆ. 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.