<p><strong>ಬೆಂಗಳೂರು</strong>: ಪಕ್ಷದ ಶಾಸಕರು ಮತ್ತು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿ ಸೇರಿದಂತೆ ₹ 100 ಕೋಟಿಯನ್ನು ಕೋವಿಡ್ ಲಸಿಕೆ ಖರೀದಿಗಾಗಿ ಸರ್ಕಾರಕ್ಕೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದರು.</p>.<p>ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ₹ 1 ಕೋಟಿ ಮೊತ್ತವನ್ನು ಲಸಿಕೆ ಖರೀದಿಗಾಗಿ ರಾಜ್ಯ ಸರ್ಕಾರಕ್ಕೆ ಬಿಟ್ಟುಕೊಡುತ್ತಾರೆ. ಉಳಿದ ಮೊತ್ತವನ್ನು ಕೆಪಿಸಿಸಿ ಭರಿಸಲಿದೆ. 95 ಶಾಸಕರು, ಸಂಸದರಿಂದ ತಲಾ 1 ಕೋಟಿ ಸೇರಿದಂತೆ ₹100 ಕೋಟಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆದಿದೆ. ಅದರ ಬಗ್ಗೆ ಅನುಮಾನಗಳಿವೆ. ಈಗ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಮೊತ್ತವನ್ನು ಪಾರದರ್ಶಕ ರೀತಿಯಲ್ಲಿ ಬಳಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.</p>.<p>ದೇಶದ ಜನರು ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಿದ್ದಾರೋ ಗೊತ್ತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಜನರ ನೆರವಿಗೆ ಬರುತ್ತಿಲ್ಲ ಎಂದು ಟೀಕಿಸಿದರು.</p>.<p>ಡಿ.ಕೆ. ಶಿವಕುಮಾರ್ ಮಾತನಾಡಿ, 'ಕೋವಿಡ್ ಎದುರಿಸಲು ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಸಹಾಯ ಹಸ್ತ ನೀಡುತ್ತಿದೆ. ಅದನ್ನು ಸರಿಯಾಗಿ ಬಳಸಿಕೊಂಡು ಜನರಿಗೆ ಲಸಿಕೆ ನೀಡಬೇಕು' ಎಂದರು.</p>.<p>ಲಾಕ್ ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಆಹಾರ ನೀಡುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ನ್ಯಾಯಾಲಯಗಳೂ ಈ ಮಾತು ಹೇಳಿದ್ದವು. ಆದರೆ, ರಾಜ್ಯ ಸರ್ಕಾರ ಆಹಾರ ಪಡೆಯಲು ಬರುವವರಿಗೆ ಗುರುತಿನ ಚೀಟಿ ಕೇಳುತ್ತಿದೆ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಕ್ಷದ ಶಾಸಕರು ಮತ್ತು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿ ಸೇರಿದಂತೆ ₹ 100 ಕೋಟಿಯನ್ನು ಕೋವಿಡ್ ಲಸಿಕೆ ಖರೀದಿಗಾಗಿ ಸರ್ಕಾರಕ್ಕೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದರು.</p>.<p>ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ₹ 1 ಕೋಟಿ ಮೊತ್ತವನ್ನು ಲಸಿಕೆ ಖರೀದಿಗಾಗಿ ರಾಜ್ಯ ಸರ್ಕಾರಕ್ಕೆ ಬಿಟ್ಟುಕೊಡುತ್ತಾರೆ. ಉಳಿದ ಮೊತ್ತವನ್ನು ಕೆಪಿಸಿಸಿ ಭರಿಸಲಿದೆ. 95 ಶಾಸಕರು, ಸಂಸದರಿಂದ ತಲಾ 1 ಕೋಟಿ ಸೇರಿದಂತೆ ₹100 ಕೋಟಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆದಿದೆ. ಅದರ ಬಗ್ಗೆ ಅನುಮಾನಗಳಿವೆ. ಈಗ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಮೊತ್ತವನ್ನು ಪಾರದರ್ಶಕ ರೀತಿಯಲ್ಲಿ ಬಳಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.</p>.<p>ದೇಶದ ಜನರು ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಿದ್ದಾರೋ ಗೊತ್ತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಜನರ ನೆರವಿಗೆ ಬರುತ್ತಿಲ್ಲ ಎಂದು ಟೀಕಿಸಿದರು.</p>.<p>ಡಿ.ಕೆ. ಶಿವಕುಮಾರ್ ಮಾತನಾಡಿ, 'ಕೋವಿಡ್ ಎದುರಿಸಲು ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಸಹಾಯ ಹಸ್ತ ನೀಡುತ್ತಿದೆ. ಅದನ್ನು ಸರಿಯಾಗಿ ಬಳಸಿಕೊಂಡು ಜನರಿಗೆ ಲಸಿಕೆ ನೀಡಬೇಕು' ಎಂದರು.</p>.<p>ಲಾಕ್ ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಆಹಾರ ನೀಡುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ನ್ಯಾಯಾಲಯಗಳೂ ಈ ಮಾತು ಹೇಳಿದ್ದವು. ಆದರೆ, ರಾಜ್ಯ ಸರ್ಕಾರ ಆಹಾರ ಪಡೆಯಲು ಬರುವವರಿಗೆ ಗುರುತಿನ ಚೀಟಿ ಕೇಳುತ್ತಿದೆ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>