<p><strong>ಬೆಂಗಳೂರು</strong>: ‘ಸಂಘಟನೆಯ ಜತೆಗೆ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮಾರ್ಚ್ 3ರಂದು ಈ ಕಾರ್ಯಕ್ರಮ ಆರಂಭಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮಾರ್ಚ್ 1ರಂದು ದೇವಾಲಯ ಹಾಗೂ ದರ್ಗಾಕ್ಕೆ ಭೇಟಿ ಮಾಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, 3ರಂದು ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಟು ದೇವನಹಳ್ಳಿಯಲ್ಲಿ ಮೊದಲ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂಜೆ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>‘ಪ್ರತಿ ಕ್ಷೇತ್ರದಲ್ಲೂ ಜನರ ಮಧ್ಯೆ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ಸರ್ಕಾರದಿಂದ ಎಲ್ಲ ವರ್ಗದ ಜನರಿಗೆ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಾಗಿದೆ. ವರ್ತಕರು, ರೈತರು, ಕಾರ್ಮಿಕರು ಎಲ್ಲ ವರ್ಗಕ್ಕೂ ಅನ್ಯಾಯವಾಗುತ್ತಿದೆ. ಈ ವಿಚಾರವಾಗಿ ಜನರಲ್ಲಿ ಎಚ್ಚರಿಸಿ, ಅವರ ಧ್ವನಿಯನ್ನು ಕೇಂದ್ರ – ರಾಜ್ಯ ಸರ್ಕಾರಕ್ಕೆ ಮುಟ್ಟಿಸುತ್ತೇವೆ. ಎಲ್ಲ ನಗರಗಳ ಮುಖ್ಯರಸ್ತೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<p>‘ಅಧಿವೇಶನದಲ್ಲಿ ಭಾಗವಹಿಸಲು ತೊಂದರೆ ಆಗದಂತೆ ಪಕ್ಷದ ಕಾರ್ಯಾಧ್ಯಕ್ಷರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಜಿಲ್ಲಾಧ್ಯಕ್ಷರ ಜತೆ ಸೇರಿ ಅವರು ಕಾರ್ಯಕ್ರಮದ ಸಿದ್ಥತೆ ನಡೆಸುತ್ತಾರೆ’ ಎಂದರು.</p>.<p><strong>ಕಾಂಗ್ರೆಸ್ಗೆ ಪ್ರಸನ್ನಕುಮಾರ್:</strong> ‘ಪುಲಕೇಶಿನಗರದ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್ ಅವರನ್ನು ಪಕ್ಷದ ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.</p>.<p>‘ಡಿ.ಜೆ ಹಳ್ಳಿ ಘಟನೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಭಾಗಿಯಾಗಿಲ್ಲ. ಬಿಜೆಪಿ ಸರ್ಕಾರ ಕಾಂಗ್ರೆಸ್ ಮೇಲೆ ಆರೋಪ ಮಾಡಲು ಈ ರೀತಿ ಹೇಳುತ್ತಿದೆ. ಈ ಘಟನೆಯಲ್ಲಿ ಯಾವುದೇ ಕಾಂಗ್ರೆಸ್ ನಾಯಕರು ಭಾಗಿಯಾಗಿಲ್ಲ. ಅಖಂಡ ಶ್ರೀನಿವಾಸಮೂರ್ತಿ ಅವರು ವೈಯಕ್ತಿಕ ವಿಚಾರವಾಗಿ ಮಾತನಾಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಂಘಟನೆಯ ಜತೆಗೆ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮಾರ್ಚ್ 3ರಂದು ಈ ಕಾರ್ಯಕ್ರಮ ಆರಂಭಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮಾರ್ಚ್ 1ರಂದು ದೇವಾಲಯ ಹಾಗೂ ದರ್ಗಾಕ್ಕೆ ಭೇಟಿ ಮಾಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, 3ರಂದು ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಟು ದೇವನಹಳ್ಳಿಯಲ್ಲಿ ಮೊದಲ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂಜೆ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>‘ಪ್ರತಿ ಕ್ಷೇತ್ರದಲ್ಲೂ ಜನರ ಮಧ್ಯೆ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ಸರ್ಕಾರದಿಂದ ಎಲ್ಲ ವರ್ಗದ ಜನರಿಗೆ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಾಗಿದೆ. ವರ್ತಕರು, ರೈತರು, ಕಾರ್ಮಿಕರು ಎಲ್ಲ ವರ್ಗಕ್ಕೂ ಅನ್ಯಾಯವಾಗುತ್ತಿದೆ. ಈ ವಿಚಾರವಾಗಿ ಜನರಲ್ಲಿ ಎಚ್ಚರಿಸಿ, ಅವರ ಧ್ವನಿಯನ್ನು ಕೇಂದ್ರ – ರಾಜ್ಯ ಸರ್ಕಾರಕ್ಕೆ ಮುಟ್ಟಿಸುತ್ತೇವೆ. ಎಲ್ಲ ನಗರಗಳ ಮುಖ್ಯರಸ್ತೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<p>‘ಅಧಿವೇಶನದಲ್ಲಿ ಭಾಗವಹಿಸಲು ತೊಂದರೆ ಆಗದಂತೆ ಪಕ್ಷದ ಕಾರ್ಯಾಧ್ಯಕ್ಷರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಜಿಲ್ಲಾಧ್ಯಕ್ಷರ ಜತೆ ಸೇರಿ ಅವರು ಕಾರ್ಯಕ್ರಮದ ಸಿದ್ಥತೆ ನಡೆಸುತ್ತಾರೆ’ ಎಂದರು.</p>.<p><strong>ಕಾಂಗ್ರೆಸ್ಗೆ ಪ್ರಸನ್ನಕುಮಾರ್:</strong> ‘ಪುಲಕೇಶಿನಗರದ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್ ಅವರನ್ನು ಪಕ್ಷದ ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.</p>.<p>‘ಡಿ.ಜೆ ಹಳ್ಳಿ ಘಟನೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಭಾಗಿಯಾಗಿಲ್ಲ. ಬಿಜೆಪಿ ಸರ್ಕಾರ ಕಾಂಗ್ರೆಸ್ ಮೇಲೆ ಆರೋಪ ಮಾಡಲು ಈ ರೀತಿ ಹೇಳುತ್ತಿದೆ. ಈ ಘಟನೆಯಲ್ಲಿ ಯಾವುದೇ ಕಾಂಗ್ರೆಸ್ ನಾಯಕರು ಭಾಗಿಯಾಗಿಲ್ಲ. ಅಖಂಡ ಶ್ರೀನಿವಾಸಮೂರ್ತಿ ಅವರು ವೈಯಕ್ತಿಕ ವಿಚಾರವಾಗಿ ಮಾತನಾಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>