ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗದಲ್ಲಿ ಜ. 8ಕ್ಕೆ ಕಾಂಗ್ರೆಸ್‌ನಿಂದ ಎಸ್‌ಸಿ–ಎಸ್‌ಟಿ ಏಕತಾ ಸಮಾವೇಶ

Last Updated 27 ನವೆಂಬರ್ 2022, 18:17 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದಲ್ಲಿ ಜನವರಿ 8ರಂದು ಎಸ್‌ಸಿ–ಎಸ್‌ಟಿ ಏಕತಾ ಸಮಾವೇಶ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ. ಈ ಸಮಾವೇಶಕ್ಕೂ ಮೊದಲು ಸ್ಥಳೀಯವಾಗಿ ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳಲು ಕೂಡಾ ತೀರ್ಮಾನಿಸಲಾಗಿದೆ.

‘ಸಮಾವೇಶಕ್ಕೆ 5 ಲಕ್ಷದಿಂದ 10 ಲಕ್ಷ ಜನರನ್ನು ಸೇರಿಸಲು ಚರ್ಚೆ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಪ್ರಮುಖ ನಾಯಕರನ್ನು ಆಹ್ವಾನಿಸಲಾಗುವುದು’ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.‌

ಪೂರ್ವಭಾವಿ ಸಭೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ನಡೆಯಿತು. ಶಾಸಕ ಜಿ. ಪರಮೇಶ್ವರ, ಮುಖಂಡರಾದ ಎಚ್‌.ಸಿ. ಮಹದೇವಪ್ಪ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT