ಬೆಂಗಳೂರು: ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ತುಳಿಯುತ್ತಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಕುಟುಂಬ ರಾಜಕಾರಣಕ್ಕಾಗಿ ಕಾಂಗ್ರೆಸ್ 65 ವರ್ಷ ವಿದೇಶಿ ಶಕ್ತಿಗಳನ್ನು ಆಶ್ರಯಿಸಿತು ಎಂದು ವ್ಯಂಗವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ ಘಟಕ, ಕಾಂಗ್ರೆಸ್ ಈಗ ಪ್ರಜಾಪ್ರಭುತ್ವದ ಕುರಿತು ಮಾತನಾಡುತ್ತಿದೆ. ಆದರೆ ಕುಟುಂಬ ರಾಜಕಾರಣಕ್ಕಾಗಿ ಕಾಂಗ್ರೆಸ್ 65 ವರ್ಷ ವಿದೇಶಿ ಶಕ್ತಿಗಳನ್ನೇ ಆಶ್ರಯಿಸಿತ್ತು. ಕುಟುಂಬ ರಾಜಕಾರಣಕ್ಕೆ ಮತದಾರರು ತಿಲಾಂಜಲಿ ನೀಡಿ ಈಗ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ ಎಂದಿದೆ.
ಅಪಾಯದಲ್ಲಿರುವುದು ಪ್ರಜಾಪ್ರಭುತ್ವವಲ್ಲ, ನಿಮ್ಮ ನ್ಯಾಷನಲ್ ಹೆರಾಲ್ಡ್ ಕೇಸು ಮತ್ತು ಕರ್ನಾಟಕದ ನಾಯಕರು ಮಾಡಿಟ್ಟ ಅಕ್ರಮ ಕಾಸು ಎಂದು ಬಿಜೆಪಿ ತಿರುಗೇಟು ನೀಡಿದೆ.
ಕೇಂಬ್ರಿಜ್ನಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹೇಳಿಕೆಯನ್ನು ಮೋದಿ ಸರ್ಕಾರ ತಿರುಚುತ್ತಿದೆ ಎಂದು ಆರೋಪಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.