ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಂಸದೀಯ ವ್ಯವಸ್ಥೆಯ ನಡವಳಿಕೆ ಪ್ರಕಾರ, ವಿಧಾನಸಭೆಯಲ್ಲಿ ಸದನದ ಸದಸ್ಯರ ಹೊರತಾಗಿ ರಾಷ್ಟ್ರಪತಿ ಮತ್ತು ರಾಜ್ಯಪಾಲರು ಮಾತ್ರ ಮಾತನಾಡಬಹುದು. ಆದರೆ, ಬಿಜೆಪಿ ಸರ್ಕಾರ ಲೋಕಸಭೆಯ ಸ್ಪೀಕರ್ ಅವರನ್ನು ಭಾಷಣಕ್ಕೆ ಆಹ್ವಾನಿಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿಹಾಡಿದೆ’ ಎಂದರು.