ಸಂವಿಧಾನದಲ್ಲಿ ಎಲ್ಲ ಧರ್ಮ, ಸಮುದಾಯಗಳಿಗೂ ಸಮಾನ ಗೌರವವಿದೆ. ಭಾರತ ಜಾತ್ಯತೀತ ರಾಷ್ಟ್ರ. ಈ ಕಾರಣಕ್ಕಾಗಿ ಜಗತ್ತಿನಲ್ಲಿ ಭಾರತಕ್ಕೆ ಗೌರವವಿದೆ. ಚರ್ಚ್ ಮೇಲೆ ದಾಳಿ ಮಾಡುವುದು, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ. ಬಿಜೆಪಿ ಸರ್ಕಾರ ಅಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು. ಹಾಗೆ ಮಾಡಿದರೆ ರಾಜ್ಯದ ಗೌರವಕ್ಕೆ ಕುಂದುಂಟಾಗುತ್ತದೆ ಮತ್ತು ಕಾನೂನು ಸುವ್ಯವಸ್ಥೆಯೂ ಹದಗೆಡುತ್ತದೆ ಎಂದು ಹೇಳಿದರು.